ಆ್ಯಪ್ನಗರ

ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹ

ಧಾರವಾಡ : ಉತ್ತರ ಕರ್ನಾಟಕದ ನೆರೆ ಪೀಡಿತರಿಗೆ ಸಂವಿಧಾನದ ಕಲಂ 21,22ರ ಅಡಿ ಪರಿಹಾರ ಮತ್ತು ಪುನರ್ವಸತಿ ನೀಡುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ರೈತ ಮಹಿಳಾ ವೇದಿಕೆ ಪದಾಧಿಕಾರಿಗಳು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Vijaya Karnataka 21 Aug 2019, 5:00 am
ಧಾರವಾಡ : ಉತ್ತರ ಕರ್ನಾಟಕದ ನೆರೆ ಪೀಡಿತರಿಗೆ ಸಂವಿಧಾನದ ಕಲಂ 21,22ರ ಅಡಿ ಪರಿಹಾರ ಮತ್ತು ಪುನರ್ವಸತಿ ನೀಡುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ರೈತ ಮಹಿಳಾ ವೇದಿಕೆ ಪದಾಧಿಕಾರಿಗಳು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
Vijaya Karnataka Web the demand for resettlement of refugees
ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹ


ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 18 ಜಿಲ್ಲೆ 86 ತಾಲೂಕುಗಳ ಸುಮಾರು 2074 ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡು, ಸಾರ್ವಜನಿಕ ಆಸ್ತಿ, ಜಾನುವಾರು, ಮಾನವ ಹಾನಿ ಸೇರಿದಂತೆ ಜನಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಆದಷ್ಟು ಬೇಗ ಸೂಕ್ತ ಪುನರ್ವಸತಿ ಹಾಗೂ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಜತೆಗೆ ಉತ್ತರ ಕರ್ನಾಟಕದ ಸಮಗ್ರ ಪ್ರಗತಿಗೆ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್‌ ನೀಡಬೇಕು. ಅಲ್ಲದೇ 1 ಹೆಕ್ಟರ್‌ಗೆ 50 ಸಾವಿರ, ಮನೆ ನಾಶಕ್ಕೆ 10 ಲಕ್ಷ , ಭಾಗಶಃ ಬಿದ್ದ ಮನೆಗೆ 5 ಲಕ್ಷ , ಜಾನುವಾರುಗಳ ಹಾನಿಗೆ 50 ಸಾವಿರದಿಂದ 75 ಸಾವಿರ ರೂ. ವರೆಗೆ ಪರಿಹಾರ ಹಣ ನಿಡಬೇಕು ಎಂದು ಆಗ್ರಹಿಸಿದರು.

ಮಹಾ ಮಳೆಗೆ ಭೂಮಿ, ಪೈರು ಹಾಳಾಗಿದೆ. ಹೀಗಾಗಿ ರೈತರಿಗೆ ಅನುಕೂಲವಾಗುವಂತೆ ಫಸಲ್‌ ಬಿಮಾ ಯೋಜನೆಯಡಿ ಕಂತು ಕಟ್ಟಿದ ಎಲ್ಲ ರೈತರಿಗೆ ಒಂದೇ ವಾರದಲ್ಲಿ ವಿಮಾ ಪರಿಹಾರ ನಿಡಬೇಕು. ಜತೆಗೆ ರೋಜಗಾರ ಯೋಜನೆ ಅಡಿ ಎಲ್ಲರಿಗೆ ಉದ್ಯೋಗ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಅಲ್ಲದೇ ಉತ್ತರ ಕರ್ನಾಟಕದ ಜೀವನದಿಗಳಾದ ಕೃಷ್ಣ, ಘಟಪ್ರಭಾ, ಮಲಪ್ರಭಾ, ತುಂಗಾ, ಭದ್ರಾ ನದಿ ಪಾತ್ರಗಳಲ್ಲಿನ ಹಳ್ಳಿಗರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ 5 ರಿಂದ 10 ಲಕ್ಷ ರೂ. ವರೆಗೆ ಸಾಲ ವಿತರಿಸಬೇಕು. ಶೀಘ್ರ ಅಧಿಕಾರಿಗಳಿಂದ ಸರ್ವೆ ಮಾಡಿಸಿ ಪರಿಹಾರ ಮತ್ತು ವಸತಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಪ್ರದಾನಮಂತ್ರಿ, ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷೆ ಶೋಭಾ ಚಲವಾದಿ, ಚಿಂತಕ ಲಕ್ಷ ್ಮಣ ಬಕ್ಕಾಯಿ, ಶೈಲಾ, ಮಹಾದೇವಿ, ಪಾರವ್ವ, ಮಂಜುಳಾ ಶಶಿಕಲಾ ಸೇರಿದಂತೆ ಇತರ ಮಹಿಳಾ ಪದಾಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ