ಆ್ಯಪ್ನಗರ

ಚಿಕಿತ್ಸಾ ವೆಚ್ಚ ಸರಕಾರವೇ ಭರಿಸಲು ಆಗ್ರಹ

ಕೊರೊನಾ ಸೋಂಕಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಆಗ್ರಹಿಸಿ ಎಸ್‌ಯುಸಿಐ (ಕಮ್ಯುನಿಸ್ಟ್‌) ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ...

Vijaya Karnataka 23 Jun 2020, 5:00 am
ಧಾರವಾಡ: ಕೊರೊನಾ ಸೋಂಕಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಆಗ್ರಹಿಸಿ ಎಸ್‌ಯುಸಿಐ (ಕಮ್ಯುನಿಸ್ಟ್‌) ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಲಾಯಿತು.
Vijaya Karnataka Web the government wants to cover the cost of treatment
ಚಿಕಿತ್ಸಾ ವೆಚ್ಚ ಸರಕಾರವೇ ಭರಿಸಲು ಆಗ್ರಹ


ಈ ವೇಳೆ ಪಕ್ಷದ ಜಿಲ್ಲಾಸಮಿತಿ ಸದಸ್ಯ ಗಂಗಾಧರ ಬಡಿಗೇರ ಮಾತನಾಡಿ, ರಾಜ್ಯ ಸರಕಾರವು ಕೋವಿಡ್‌- 19 ಸಾಂಕ್ರಾಮಿಕ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆ ಬಳಸಿಕೊಳ್ಳಲು ತೀರ್ಮಾನಿಸಿದ್ದು, ಅವುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆ ಅನ್ವಯವಾಗುವ ರೋಗಿಗಳಿಗೆ, ಪ್ರತಿ ದಿನಕ್ಕೆ ಸೌಲಭ್ಯಕ್ಕೆ ಅನುಗುಣವಾಗಿ ದರ ನಿಗದಿಪಡಿಸಲಾಗಿದೆ. ಅದೇ ರೀತಿ ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆಗೆ ಒಳಪಡದ ಆರೋಗ್ಯ ವಿಮೆ ಅಥವಾ ನಗದು ಪಾವತಿಸುವ ರೋಗಿಗಳಿಗೆ ಈ ದರವು ಇನ್ನೂ ಹೆಚ್ಚಾಗಲಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಸರಕಾರವೇ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿದರು.

ಭವಾನಿ ಶಂಕರ, ಲಕ್ಷತ್ರ್ಮಣ ಜಡಗನ್ನವರ, ಮಹಾಂತೇಶ ಬೀಳೂರ, ವಿಜಯಲಕ್ಷಿತ್ರ್ಮೕ ದೇವತ್ಕÇ, ಹನುಮೇಶ ಹುಡೇದ, ರಣಜೀತ ದೂಪದ, ದೇವಮ್ಮ ದೇವತ್ಕಲ್‌, ಶಶಿಕಲಾ ಮೇಟಿ, ಕೊಟ್ರೇಶ್‌ ಹುಬ್ಬಳ್ಳಿ, ನಿಂಗಮ್ಮ ಹುಡೇದ ಇತರರು ಪ್ರತಿಭಟನೆಯಲ್ಲಿಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ