ಆ್ಯಪ್ನಗರ

ನಾಯ್ಕರ್‌ ಪಿಯು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಇಂದು

ಹುಬ್ಬಳ್ಳಿ: ನಾಯ್ಕರ ಶಿಕ್ಷಣ ಸಂಸ್ಥೆಯ ಮಾಲತೇಶ ಸ್ವತಂತ್ರ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿನ. 3ರಂದು ಬೆಳಗ್ಗೆ 11ಕ್ಕೆ ನೆರವೇರಲಿದೆ ಎಂದು ಸಂಸ್ಥೆ ಸಂಸ್ಥಾಪಕ ಹಾಗೂ ಡಾ. ಸಿ.ಎನ್‌. ನಾಯ್ಕರ್‌ ಎಂದು ತಿಳಿಸಿದರು.

Vijaya Karnataka 3 Nov 2019, 5:00 am
ಹುಬ್ಬಳ್ಳಿ: ನಾಯ್ಕರ ಶಿಕ್ಷಣ ಸಂಸ್ಥೆಯ ಮಾಲತೇಶ ಸ್ವತಂತ್ರ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿನ. 3ರಂದು ಬೆಳಗ್ಗೆ 11ಕ್ಕೆ ನೆರವೇರಲಿದೆ ಎಂದು ಸಂಸ್ಥೆ ಸಂಸ್ಥಾಪಕ ಹಾಗೂ ಡಾ. ಸಿ.ಎನ್‌. ನಾಯ್ಕರ್‌ ಎಂದು ತಿಳಿಸಿದರು.
Vijaya Karnataka Web the inauguration of the new building of naicker pu college today
ನಾಯ್ಕರ್‌ ಪಿಯು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಇಂದು


ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ನೂತನ ಕಟ್ಟಡವನ್ನು ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಉದ್ಘಾಟಿಸುವರು. ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿಜರುಗುವ ಸಾಂಸ್ಕೃತಿಕ ಉತ್ಸವಕ್ಕೆ ಪಂಚ ಭಾಷಾ ಚಲನಚಿತ್ರ ನಟಿ ಪ್ರೇಮಾ ಚಾಲನೆ ನೀಡಲಿದ್ದಾರೆ. ಅತಿಥಿಗಳಾಗಿ ಶಾಸಕ ಶಂಕರಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಉದ್ಯಮಿ ಬಸಂತಕುಮಾರ ಪಾಟೀಲ ಭಾಗವಹಿಸಲಿದ್ದಾರೆ. ಡಾ. ಸಿ.ಎನ್‌. ನಾಯ್ಕರ್‌ ಅಧ್ಯಕ್ಷತೆ ವಹಿಸುವರು ಎಂದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮಹಾವಿದ್ಯಾಲಯ ಪ್ರಾರಂಭಿಸಲಾಗಿದೆ. ಅತೀ ಕಡಿಮೆ ಪ್ರವೇಶ ಶುಲ್ಕದಲ್ಲಿವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. ಆದ್ದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿಸಂಸ್ಥೆ ಅಧ್ಯಕ್ಷೆ ಶ್ವೇತಾ ನಾಯ್ಕರ, ಕಾರ್ಯದರ್ಶಿ ಶಿವಪ್ಪ ಅಣ್ಣಿಗೇರಿ, ನಿರ್ದೇಶಕ ಗಂಗಾಧರ, ನಿಂಗಪ್ಪ ನಾಯ್ಕರ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ