ಆ್ಯಪ್ನಗರ

ಬಿಜೆಪಿ ಸರಕಾರಕ್ಕೆ ಜೆಡಿಎಸ್‌ ಬೆಂಬಲಿಸಲ್ಲ

ಹುಬ್ಬಳ್ಳಿ : ಉಪಚುನಾವಣೆಯಲ್ಲಿನಿರೀಕ್ಷಿತ 8 ಸ್ಥಾನ ಗೆಲ್ಲದಿದ್ದರೆ ಬಿಜೆಪಿ ಸರಕಾರ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಂತದಲ್ಲಿಜೆಡಿಎಸ್‌ ಬಿಜೆಪಿಗೆ ಬೆಂಬಲಿಸುವುದಿಲ್ಲಎಂಬುದು ಗೊತ್ತಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿಸ್ವಾಭಾವಿಕವಾಗಿ ಪರಿಸ್ಥಿತಿ ಬದಲಾಗಲಿದೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ

Vijaya Karnataka 26 Nov 2019, 5:52 pm
ಹುಬ್ಬಳ್ಳಿ : ಉಪಚುನಾವಣೆಯಲ್ಲಿನಿರೀಕ್ಷಿತ 8 ಸ್ಥಾನ ಗೆಲ್ಲದಿದ್ದರೆ ಬಿಜೆಪಿ ಸರಕಾರ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಂತದಲ್ಲಿಜೆಡಿಎಸ್‌ ಬಿಜೆಪಿಗೆ ಬೆಂಬಲಿಸುವುದಿಲ್ಲಎಂಬುದು ಗೊತ್ತಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿಸ್ವಾಭಾವಿಕವಾಗಿ ಪರಿಸ್ಥಿತಿ ಬದಲಾಗಲಿದೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ಮತ್ತೆ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರದ ಸುಳಿವು ನೀಡಿದ್ದಾರೆ.
Vijaya Karnataka Web the jds does not support the bjp government
ಬಿಜೆಪಿ ಸರಕಾರಕ್ಕೆ ಜೆಡಿಎಸ್‌ ಬೆಂಬಲಿಸಲ್ಲ


ನಗರದಲ್ಲಿಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ''ಜೆಡಿಎಸ್‌ ನೂರಕ್ಕೆ ನೂರರಷ್ಟು ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ. ಇದು ನನಗೆ ಗೊತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಗೆ 8 ಸ್ಥಾನ ಗೆಲ್ಲಬೇಕು. ಇಲ್ಲದಿದ್ದರೆ ಬಿಜೆಪಿ ಅಧಿಕಾರ ತ್ಯಜಿಸಬೇಕಾಗುತ್ತದೆ. ಮತ್ತೆ ವಿಶ್ವಾಸಮತ ಯಾಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ'' ಎಂದರು.

ಬಿಜೆಪಿ ಸರಕಾರ ಪತನವಾದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಬೆಂಬಲಿಗರ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ''ನಾನು ಹಾಗೆ ಹೇಳಿದ್ದೀನಾ? ಸರಕಾರ ಬಿದ್ದು ಹೋದರೆ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ನಿರೀಕ್ಷೆ ಮಾಡಿದ್ದೇವೆ. ಚುನಾವಣೆ ನಡೆದರೆ ಕಾಂಗ್ರೆಸ್‌ ನೂರಕ್ಕೆ ನೂರರಷ್ಟು ಜಯ ಗಳಿಸಲಿದೆ. ಆಗ ಸಿಎಂ ಯಾರಾಗಬೇಕೆಂಬುದನ್ನು ಹೈಕಮಾಂಡ್‌ ನಿರ್ಧರಿಸಲಿದೆ'' ಎಂದು ತಿಳಿಸಿದರು.

''ಮಹಾರಾಷ್ಟ್ರದಲ್ಲಿಅಕ್ಷರಶಃ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ವಾಪಸ್‌ ಪಡೆದು ಬೆಳಗಾಗುವುದರೊಳಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತದೆ ಎಂದರೆ ಪ್ರಜಾಪ್ರಭುತ್ವದ ಅಣಕವಲ್ಲದೆ ಬೇರೇನೂ ಅಲ್ಲ'' ಎಂದು ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ