ಆ್ಯಪ್ನಗರ

ಕೃಷಿ ಸಚಿವರ ಕ್ಷಮೆಯಾಚನೆಗೆ ಆಗ್ರಹ

ಧಾರವಾಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ತಕ್ಷಣವೇ ಕ್ಷಮೆ ಯಾಚಿಸಬೇಕು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸರು. ಕೆಲಕಾಲ

Vijaya Karnataka 19 Sep 2020, 5:00 am
ಧಾರವಾಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ತಕ್ಷಣವೇ ಕ್ಷಮೆ ಯಾಚಿಸಬೇಕು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸರು. ಕೆಲಕಾಲ ಪ್ರತಿಭಟಿಸಿದ ರೈತರು, ಸಚಿವ ಬಿ.ಸಿ.ಪಾಟೀಲ ವಿರುದ್ಧ ಘೋಷಣೆ ಕೂಗಿದರು. ಚಂದ್ರಶೇಖರ ಕೋಡಿಹಳ್ಳಿ ಅವರು, ರಾಜ್ಯದ ರೈತರ ಕಣ್ಮನಿ. ಹೋರಾಟದ ಮೂಲಕ ರೈತರ ಸಮಸ್ಯಗಳಿಗೆ ಪರಿಹಾರ ಒದಗಿಸಿದ ರೈತ ನಾಯಕರ ಬಗ್ಗೆ ಅವಹೇಳ ಮಾತನಾಡುವುದು ಖಂಡನೀಯ. ಆದ್ದರಿಂದ ತಕ್ಷಣವೇ ಸಚಿವ ಬಿ.ಸಿ. ಪಾಟೀಲ ರಾಜ್ಯದ ರೈತ ಸಮೂಹಕ್ಕೆ ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 18MALLU4_21
ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಎದುರು ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.


ಮುಖಂಡರಾದ ರಮೇಶ ಕಿತ್ತೂರ, ಚನ್ನಬಸಪ್ಪ ಹಡಪದ, ಚಂದ್ರಶೇಖರ ಕುರಳ್ಳಿ, ಕಲ್ಮೇಶ ಲಿಗಾಡೆ, ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ