ಆ್ಯಪ್ನಗರ

ಕುಂದಗೋಳ ಕ್ಷೇತ್ರದ ಜನ ಬುದ್ಧಿವಂತರು

ಹುಬ್ಬಳ್ಳಿ : ಡಿ.ಕೆ. ಶಿವಕುಮಾರ ಹಣದ ಚೀಲ ಹಿಡಿದುಕೊಂಡು ಮತದಾರರನ್ನು ಖರೀದಿಸುವ ದುರಹಂಕಾರದಿಂದ ಕ್ಷೇತ್ರಕ್ಕೆ ಬಂದಿದ್ದಾರೆ. ಆದರೆ ಮತದಾರರು ಇದ್ಯಾವುದನ್ನು ನೋಡದೇ ಮನೆಗೆ ಕಳಿಹಿಸುತ್ತಾರೆ ಎಂದು ಸಂಸದ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.

Vijaya Karnataka 13 May 2019, 5:00 am
ಹುಬ್ಬಳ್ಳಿ : ಡಿ.ಕೆ. ಶಿವಕುಮಾರ ಹಣದ ಚೀಲ ಹಿಡಿದುಕೊಂಡು ಮತದಾರರನ್ನು ಖರೀದಿಸುವ ದುರಹಂಕಾರದಿಂದ ಕ್ಷೇತ್ರಕ್ಕೆ ಬಂದಿದ್ದಾರೆ. ಆದರೆ ಮತದಾರರು ಇದ್ಯಾವುದನ್ನು ನೋಡದೇ ಮನೆಗೆ ಕಳಿಹಿಸುತ್ತಾರೆ ಎಂದು ಸಂಸದ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.
Vijaya Karnataka Web the people of the kundgol are intelligent
ಕುಂದಗೋಳ ಕ್ಷೇತ್ರದ ಜನ ಬುದ್ಧಿವಂತರು


ಕುಂದಗೋಳ ತಾಲೂಕು ಹಿರೇಹರಕುಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ ಪರ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕುಂದಗೋಳ ಕ್ಷೇತ್ರದ ಜನ ಬುದ್ಧಿವಂತರಿದ್ದಾರೆ. ಕಾಂಗ್ರೆಸ್‌ ಕೊಡುವ 500-600 ರೂ. ಆಮೀಷಕ್ಕೆ ಒಳಗಾಗದೇ, ಬಿ.ಎಸ್‌.ಯಡಿಯೂರಪ್ಪ ರಾಜ್ಯದ ಬಡವರಿಗಾಗಿ ನೀಡಿದ ಯೋಜನೆಗಳನ್ನು ನೆನಪಿಸಿಕೊಳ್ಳಬೇಕು ಎಂದರು.

ಕುಂದಗೋಳ, ಚಿಂಚೋಳಿ ಉಪಚುನಾವಣೆ ಮಹತ್ವದ ಮತ್ತು ಜನರ ಚುನಾವಣೆಯಾಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರ ಇದ್ದರೂ ಇಲ್ಲದಂತಾಗಿದೆ. ಕುಂದಗೋಳ ಕ್ಷೇತ್ರದಲ್ಲೂ ಕೂಡ ತೋರಿಕೆಗೆ ಮಾತ್ರ ಮೈತ್ರಿ ಅಭ್ಯರ್ಥಿ ಇದ್ದಾರೆ. ಮೈತ್ರಿ ಪಕ್ಷಗಳಲ್ಲಿ ಆತಂರಿಕ ಕಿತ್ತಾಟ ಜೋರಾಗಿದ್ದು, ಚುನಾವಣೆ ಫಲಿತಾಂಶದ ನಂತರ ಇದು ಸ್ಪೋಟ್‌ಗೊಳ್ಳಲಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ, ರಾಜ್ಯದ ಜನರ ಹಿತಾಸಕ್ತಿ ಕಾಯಬೇಕಾದ ಸಿಎಂ ಕುಮಾರಸ್ವಾಮಿ ರಾಜ್ಯದ ಜನರನ್ನು ನಿರ್ಲಕ್ಷ್ಯಿಸುತ್ತಿದ್ದಾರೆ. ಆದ್ದರಿಂದ ಕುಂದಗೋಳ ಕ್ಷೇತ್ರದಲ್ಲಿ ಚಿಕ್ಕನಗೌಡರ ಗೆದ್ದರೆ ಬಿಎಸ್‌ವೈ ಸಿಎಂ ಆಗುತ್ತಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ