ಆ್ಯಪ್ನಗರ

ಇಂದು ಖಾಸಗಿ ಆಸ್ಪತ್ರೆ ಓಪಿಡಿ ಬಂದ್‌

ಹುಬ್ಬಳ್ಳಿ: ಪಶ್ಚಿಮ ಬಂಗಾಳದ ಎನ್‌ಆರ್‌ಎಸ್‌ ಆಸ್ಪತ್ರೆಯಲ್ಲಿ ವೈದ್ಯನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಅಖಿಲ ಭಾರತ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿರುವ ವೈದ್ಯಕೀಯ ಸೇವೆ ಬಂದ್‌ಗೆ ಧಾರವಾಡ ಜಿಲ್ಲಾ ಐಎಂಎ ಘಟಕ ಬೆಂಬಲ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತಗೊಳ್ಳಲಿದೆ. ಕೇವಲ ತುರ್ತು ಚಿಕಿತ್ಸೆ ಮಾತ್ರ ದೊರೆಯಲಿದೆ.

Vijaya Karnataka 17 Jun 2019, 5:00 am
ಹುಬ್ಬಳ್ಳಿ: ಪಶ್ಚಿಮ ಬಂಗಾಳದ ಎನ್‌ಆರ್‌ಎಸ್‌ ಆಸ್ಪತ್ರೆಯಲ್ಲಿ ವೈದ್ಯನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಅಖಿಲ ಭಾರತ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿರುವ ವೈದ್ಯಕೀಯ ಸೇವೆ ಬಂದ್‌ಗೆ ಧಾರವಾಡ ಜಿಲ್ಲಾ ಐಎಂಎ ಘಟಕ ಬೆಂಬಲ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತಗೊಳ್ಳಲಿದೆ. ಕೇವಲ ತುರ್ತು ಚಿಕಿತ್ಸೆ ಮಾತ್ರ ದೊರೆಯಲಿದೆ.
Vijaya Karnataka Web the private hospital today is opd band
ಇಂದು ಖಾಸಗಿ ಆಸ್ಪತ್ರೆ ಓಪಿಡಿ ಬಂದ್‌


ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿರುವ ಐಎಂಎ ಸ್ಥಳೀಯ ಅಧ್ಯಕ್ಷ ಡಾ. ಅಭಯ ಮಟ್ಕರ್‌, ''ಜಿಲ್ಲಾದ್ಯಂತ ವೈದ್ಯರು ಸೇವೆ ಸ್ಥಗಿತಗೊಳಿಸಿ ಬಂಗಾಳದ ವೈದ್ಯರ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಲಿದ್ದಾರೆ. ಬೆಳಗ್ಗೆ 6ರಿಂದ ಮರುದಿನ ಬೆಳಗ್ಗೆ 6ರ ವರೆಗೆ ಎಲ್ಲ ಖಾಸಗಿ ಆಸ್ಪತೆಗಳ ಓಪಿಡಿ (ಹೊರ ರೋಗಿ ವಿಭಾಗ) ಯಾವುದೇ ವೈದ್ಯರು ಕೆಲಸದಲ್ಲಿ ಭಾಗಿಯಾಗುವುದಿಲ್ಲ. ಕೇವಲ ತುರ್ತು ಚಿಕಿತ್ಸೆ ದೊರೆಯಲಿದೆ'' ಎಂದು ಸ್ಪಷ್ಟಪಡಿಸಿದರು.

ಧಾರವಾಡ ಎಸ್‌ಡಿಎಂ ಆಸ್ಪತ್ರೆ ಕೂಡ ಬಂದ್‌ಗೆ ಬೆಂಬಲ ಸೂಚಿಸಿದ್ದು, ಓಪಿಡಿ ಸ್ಥಗಿತಗೊಳಿಸಲಿದೆ. ಈ ಬಂದ್‌ ಪ್ರತಿಭಟನೆಯಲ್ಲಿ ಅಂದಾಜು 800 ವೈದ್ಯರು, 300 ಕ್ಲಿನಿಕ್‌ಗಳು ಹಾಗೂ 50 ಆಸ್ಪತ್ರೆಗಳು ಪಾಲ್ಗೊಳ್ಳಲಿವೆ. ಒಳ ರೋಗಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಅಗತ್ಯ ವೈದ್ಯಕೀಯ ಸೇವೆಗಳು ಎಂದಿನಂತೆ ಮುಂದುವರಿಸಲಿವೆ ಎಂದು ಡಾ. ಮಟ್ಕರ್‌ ಭರವಸೆ ವ್ಯಕ್ತಪಡಿಸಿದರು. ಓಪಿಡಿ ಸೇವೆ ಸ್ಥಗಿತಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ಕಿಮ್ಸ್‌ದಲ್ಲಿ ಹೆಚ್ಚುವರಿ ಸಿಬ್ಬಂದಿ
ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್‌ ಹಿನ್ನೆಲೆಯಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಕಿಮ್ಸ್‌ದಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ವೈದ್ಯರ ರಜೆಗಳನ್ನು ರದ್ದುಗೊಳಿಸಿದ್ದು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಆಪರೇಷನ್‌ ಥೇಟರ್‌, ತುರ್ತು ಚಿಕಿತ್ಸೆ ಮತ್ತು ಓಪಿಡಿಯಲ್ಲಿ ದಿನಕ್ಕಿಂತ ಸೋಮವಾರ ಹೆಚ್ಚಿನ ವೈದ್ಯರು ಕೆಲಸ ನಿರ್ವಹಿಸಲಿದ್ದಾರೆ ಎಂದು ಕಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್‌ 'ವಿಕ'ಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ