ಆ್ಯಪ್ನಗರ

ಫೆ.13ರಂದು ವಿಧಾನಸೌಧಕ್ಕೆ ಮುತ್ತಿಗೆ

ಧಾರವಾಡ : ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರೊ.ನಂಜುಡಸ್ವಾಮಿ ಜನ್ಮದಿನವಾದ ಫೆ.13 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಎ.ಲಕ್ಷ್ಮೀನಾರಾಯಣಗೌಡ ಎಚ್ಚರಿಸಿದರು.

Vijaya Karnataka 28 Dec 2018, 5:00 am
ಧಾರವಾಡ : ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರೊ.ನಂಜುಡಸ್ವಾಮಿ ಜನ್ಮದಿನವಾದ ಫೆ.13 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಎ.ಲಕ್ಷ್ಮೀನಾರಾಯಣಗೌಡ ಎಚ್ಚರಿಸಿದರು.
Vijaya Karnataka Web the siege of the assembly on february 13
ಫೆ.13ರಂದು ವಿಧಾನಸೌಧಕ್ಕೆ ಮುತ್ತಿಗೆ


ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಎಲ್ಲ ಸರಕಾರಗಳು ಸುಳ್ಳು ಭರವಸೆ ಮೂಲಕ ರೈತರಿಗೆ ಅನ್ಯಾಯ ಮಾಡಿವೆ. ರೈತರ ಕಲ್ಯಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಆಗ್ರಹಿಸಲಾಗುವುದು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ರೈತ ಮುಖಂಡರ ಜತೆ ಚರ್ಚಿಸುತ್ತಿದ್ದೇವೆ ಎಂದರು.

ಅಂದಿನ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಕಳಸಾ-ಬಂಡೂರಿಯನ್ನು ಮಲಪ್ರಭಾ ನದಿಗೆ ಜೋಡಿಸುವ ಯೋಜನೆ ಶೀಘ್ರ ಮಾಡಬೇಕು. ಕಬ್ಬು ಬೆಳೆಗಾರರ ಬಾಕಿ ವಿಚಾರದಲ್ಲಿ ಸ್ಪಷ್ಟತೆ ನೀಡುವಂತೆ ಆಗ್ರಹಿಸಲಾಗುವುದು ಎಂದರು.

ಅರಣ್ಯ ಭೂಮಿ, ಕಂದಾಯ ಭೂಮಿ ವರ್ಗಿಕರಣ ಮಾಡಿ ರೈತರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಳ್ಳುವುದು. ಬರ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿ ಬಿಡದೇ ಅನುದಾನ ನೀಡಬೇಕು. ಜತೆಗೆ ಉದ್ಯೋಗ ಖಾತ್ರಿ ಯೋಜನೆ ಅನ್ಯಾಯ ಸರಿಪಡಿಸಿ ಮಾನವ ದಿನಗಳನ್ನು ಹೆಚ್ಚಿಸುವ ಮೂಲಕ ಗೂಳೆ ಹೋಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ರೈತರ ಸಾಲಮನ್ನಾ ವಿಚಾರದಲ್ಲಿನ ಗೊಂದಲ ಸರಿಪಡಿಸಬೇಕು, ಫಸಲ್‌ಬಿಮಾ ಯೋಜನೆಯಲ್ಲಿ ಹಗಲು ದರೋಡೆ ಆಗುತ್ತಿದ್ದು, ಈ ಯೋಜನೆಯಲ್ಲಿ ಅನ್ಯಾಯಕ್ಕೊಳಗಾದ ರೈತರಿಗೆ ನ್ಯಾಯ ನೀಡುವುದು, ಜತೆಗೆ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಂದಿನ ಮುತ್ತಿಗೆ ಕಾರ್ಯಕ್ರಮದಲ್ಲಿ ಸರಕಾರಕ್ಕೆ ಖಡಕ್‌ಎಚ್ಚರಿಕೆ ನೀಡಲಾಗುವುದು ಎಂದರು.

ರಾಜ್ಯ ರೈತ ಸಂಘ ಹಮ್ಮಿಕೊಂಡಿರುವ ವಿಧಾನಸೌಧ ಮುತ್ತಿಗೆಗೆ ರಾಜ್ಯದ ಎಲ್ಲ ರೈತರು ಆಗಮಿಸಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡರಾದ ಮಂಜೇಗೌಡ, ಪುಟ್ಟಯ್ಯ ಟಿ, ಎನ್‌. ಮಂಜುನಾಥ ರೆಡ್ಡಿ, ನಾಗನಗೌಡ, ಶಂಕ್ರಣ್ಣ, ಜ್ಯೋತಿ ಕಣಕಪ್ಪನವರ, ಸೈಯದ್‌ ಖದೀರ್‌, ಶಮಷದ್‌ ಬೇಗಂ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ