ಆ್ಯಪ್ನಗರ

ಕ್ಲರ್ಕ್‌ ಪದ ಬಳಕೆ ಪ್ರಧಾನಿ ಘನತೆಗೆ ತಕ್ಕದಲ್ಲ: ಹೊರಟ್ಟಿ

ಹುಬ್ಬಳ್ಳಿ : ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕ್ಲರ್ಕ್‌ ಎಂಬ ಪದ ಬಳಕೆ ಮಾಡಿರುವುದು ಅವರ ಘನತೆಗೆ ಸರಿಯಲ್ಲ ಎಂದು ಜೆಡಿಎಸ್‌ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

Vijaya Karnataka 14 Jan 2019, 5:00 am
ಹುಬ್ಬಳ್ಳಿ : ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕ್ಲರ್ಕ್‌ ಎಂಬ ಪದ ಬಳಕೆ ಮಾಡಿರುವುದು ಅವರ ಘನತೆಗೆ ಸರಿಯಲ್ಲ ಎಂದು ಜೆಡಿಎಸ್‌ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
Vijaya Karnataka Web the use of the clerk word is not worth the prime minister
ಕ್ಲರ್ಕ್‌ ಪದ ಬಳಕೆ ಪ್ರಧಾನಿ ಘನತೆಗೆ ತಕ್ಕದಲ್ಲ: ಹೊರಟ್ಟಿ


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಈ ಹಿಂದೆ ಬಿಜೆಪಿ-ಜೆಡಿಎಸ್‌ ಸರಕಾರ ಇದ್ದಾಗ ಹಲವು ಬಿಕ್ಕಟ್ಟುಗಳಿದ್ದವು. ಆಗಿನ ಸಿಎಂ ಯಡಿಯೂರಪ್ಪ ವಿರುದ್ಧ ಅವರದೇ ಪಕ್ಷದ ಶ್ರೀರಾಮುಲು ಮತ್ತು ಜನಾರ್ದನ ರಡ್ಡಿ ಹೈಕಮಾಂಡ್‌ಗೆ ದೂರು ನೀಡಿದ್ದರು. ಆಗ ನಾನೇ ಅನೇಕ ಬಾರಿ ಯಡಿಯೂರಪ್ಪ ಅವರ ಮನೆಗೆ ಹೋಗಿ ಬಗೆಹರಿಸಿದ್ದೇನೆ. ಸಮ್ಮಿಶ್ರ ಸರಕಾರದಲ್ಲಿ ಇಂತಹವು ಸಾಮಾನ್ಯವಾಗಿರುತ್ತವೆ'' ಎಂದರು.

''ಸಚಿವ ಪುಟ್ಟರಂಗ ಶೆಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದೇನೆ. ಆದರೆ ಆಡಳಿತ ಪಕ್ಷದವರು ಸಮರ್ಥನೆ ಮಾಡಿಕೊಳ್ಳುವುದು ವಾಡಿಕೆ. ಈ ಹಿಂದೆ ಸಂತೋಷ ಲಾಡ್‌, ಕೆ.ಜೆ.ಜಾರ್ಜ್‌ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು. ಈಗಾಗಲೇ ಪುಟ್ಟರಂಗ ಶೆಟ್ಟಿ ವಿರುದ್ಧದ ಆರೋಪ ಕುರಿತು ತನಿಖೆ ನಡೆಯುತ್ತಿದ್ದು, ಆರೋಪ ಸಾಬೀತಾದರೆ ರಾಜೀನಾಮೆ ನೀಡಲಿ'' ಎಂದು ತಿಳಿಸಿದರು.

''ಶಾಮನೂರ ಶಿವಶಂಕರಪ್ಪ ಹಾಗೂ ಎಂ.ಬಿ.ಪಾಟೀಲ್‌ ನಡುವಿನ ವಾಕ್‌ ಸಮರ ಒಳ್ಳೆಯದಲ್ಲ. ಶಾಮನೂರ ಹಿರಿಯರು, ಎಂ.ಬಿ.ಪಾಟೀಲ ಬಗ್ಗೆ ಹಗುರವಾಗಿ ಮಾತನಾಡಬಾರದು''ಎಂದರು.

ಈ ಸಂದರ್ಭದಲ್ಲಿ ಮಹಾನಗರ ಜೆಡಿಎಸ್‌ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ, ಶಾಸಕ ಎನ್‌.ಎಚ್‌. ಕೋನರಡ್ಡಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ