ಆ್ಯಪ್ನಗರ

ಧಾರವಾಡ ಜಿಲ್ಲೆಯಲ್ಲಿ ಬಂದ್‌ ಇಲ್ಲ

ಹುಬ್ಬಳ್ಳಿ : ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಫೆ.13ರಂದು ಕರೆ ನೀಡಿರುವ ಬಂದ್‌ ಜಿಲ್ಲೆಯಲ್ಲಿನಡೆಯುವುದಿಲ್ಲಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಸ್ಪಷ್ಟಪಡಿಸಿದ್ದಾರೆ.

Vijaya Karnataka 13 Feb 2020, 5:00 am
ಹುಬ್ಬಳ್ಳಿ : ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಫೆ.13ರಂದು ಕರೆ ನೀಡಿರುವ ಬಂದ್‌ ಜಿಲ್ಲೆಯಲ್ಲಿನಡೆಯುವುದಿಲ್ಲಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web there is no bandh in dharwad district
ಧಾರವಾಡ ಜಿಲ್ಲೆಯಲ್ಲಿ ಬಂದ್‌ ಇಲ್ಲ


ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಳಿ ನಗರದಲ್ಲಿಯಾವ ಸಂಘಟನೆಗಳೂ ಬಂದ್‌ಗೆ ಬೆಂಬಲ ನೀಡಿಲ್ಲ. ಬಂದ್‌ ಕರೆ ನೀಡಿರುವ ಸಂಘಟನೆಗಳು ಸಹ ಬಂದ್‌ ಮಾಡುತ್ತೇವೆ ಎಂದು ಯಾವುದೇ ಮಾಹಿತಿ ನೀಡಿಲ್ಲ. ಇದಲ್ಲದೇ ಈ ಸಂಬಂಧ ಜಿಲ್ಲಾಡಳಿತಕ್ಕೆ ಯಾರೂ ಅನುಮತಿಗೆ ಮನವಿ ಸಲ್ಲಿಸಿಲ್ಲ. ಹಾಗಾಗಿ ಜಿಲ್ಲೆಯಲ್ಲಿಬಂದ್‌ ಇರಲ್ಲ. ಶಾಲಾ- ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದರು.

ಪೊಲೀಸ್‌ ಆಯುಕ್ತ ಆರ್‌.ದಿಲೀಪ್‌ ಹೇಳಿಕೆ ನೀಡಿದ್ದು, ಯಾವ ಸಂಘಟನೆಯೂ ಬಂದ್‌ ಅಥವಾ ಪ್ರತಿಭಟನೆ ನಡೆಸುವುದಾಗಿ ಚರ್ಚಿಸಿಲ್ಲ. ಹೀಗಾಗಿ ಹುಬ್ಬಳ್ಳಿ- ಧಾರವಾಡದಲ್ಲಿಜನಜೀವನ ಯಥಾರೀತಿ ಇರಲಿದೆ. ಎಂದಿನಂತೆ ಪೊಲೀಸ್‌ ಪೆಟ್ರೋಲಿಂಗ್‌ ಇರಲಿದೆ. ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್‌್ತ ಸಹಜವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸರೋಜಿನಿ ಮಹಿಷಿ ವರದಿ ಜಾರಿ ಬೇಡಿಕೆಗೆ ಸಹಮತ ಇದೆ. ಆದರೆ, ಬಂದ್‌ಗೆ ಬೆಂಬಲ ನೀಡುವುದಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಡುವ ಉದ್ದೇಶ ಸಂಘಟನೆಗಿಲ್ಲಎಂದು ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ಅಮೃತ ಇಜಾರಿ ತಿಳಿಸಿದ್ದಾರೆ.

ಸಾರಿಗೆ ಸಿಬ್ಬಂದಿ, ಆಟೋ ಚಾಲಕರ ಒಕ್ಕೂಟ, ಲಾರಿ ಮಾಲೀಕರ ಒಕ್ಕೂಟ, ಹೋಟೆಲ್‌ ಉದ್ಯಮಿಗಳ ಸಂಘ, ವಾಣಿಜ್ಯೋದ್ಯಮ ಸಂಘ, ಕ್ಯಾಬ್‌ ಡ್ರೈವರ್ಸ್‌ ಒಕ್ಕೂಟ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಬಂದ್‌ ಬೆಂಬಲಿಸಿಲ್ಲ. ಹೀಗಾಗಿ ಧಾರವಾಡ ಜಿಲ್ಲಾದ್ಯಂತ ಸಾರಿಗೆ ವ್ಯವಸ್ಥೆ ಸಹಜವಾಗಿರಲಿದೆ. ಶಾಲಾ- ಕಾಲೇಜುಗಳು ತೆರೆದಿರಲಿವೆ. ವ್ಯಾಪಾರ ವಹಿವಾಟಿನ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮಗಳು ಬೀರುವುದಿಲ್ಲ.

ಕನ್ನಡ ಆತ್ಮ ಇರುವವರು ಬಂದ್‌ ಬೆಂಬಲಿಸಲಿ
ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆ.13ರಂದು ಕನ್ನಡ ಪರ ಸಂಘಟನೆ ಹಮ್ಮಿಕೊಂಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಆತ್ಮ ಇರುವವರು ಬೆಂಬಲಿಸಲೇಬೇಕು ಎಂದು ಧಾರವಾಡ ಮನಸೂರು ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕನ್ನಡಿಗರ ಉದ್ಯೋಗ- ಬದುಕಿನ ಅಳಿವು- ಉಳಿವಿನ ಪ್ರಶ್ನೆಯಾಗಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿರೂಪುಗೊಂಡಿರುವ ಡಾ.ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ತಾಗಿ ಅಥವಾ ಪರಿಷ್ಕೃತ ಮಾಡಿಯಾದರೂ ಕರ್ನಾಟಕ ಸರಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ