ಧಾರವಾಡ : ಕರ್ನಾಟಕ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವುದರಿಂದ ಸಾರ್ವತ್ರಿಕ ರಜಾ ದಿನವಾದ ಅ.12ರ ಎರಡನೇ ಶನಿವಾರದಂದು ಕಂದಾಯ ಇಲಾಖೆಯ ಎಲ್ಲಅಧೀನ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಧಾರವಾಡದ ಜಿಲ್ಲೆಯ ಕಂದಾಯ ಘಟಕದಲ್ಲಿಬರುವ ಜಿಲ್ಲಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ,ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಗಳು, ತಹಸೀಲ್ದಾರ್ ಕಚೇರಿಗಳು ಹಾಗೂ ನಾಡಕಚೇರಿಗಳು ಅ.12ರ ಎರಡನೇ ಶನಿವಾರದಂದು ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಆಗಮಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಧಾರವಾಡದ ಜಿಲ್ಲೆಯ ಕಂದಾಯ ಘಟಕದಲ್ಲಿಬರುವ ಜಿಲ್ಲಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ,ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಗಳು, ತಹಸೀಲ್ದಾರ್ ಕಚೇರಿಗಳು ಹಾಗೂ ನಾಡಕಚೇರಿಗಳು ಅ.12ರ ಎರಡನೇ ಶನಿವಾರದಂದು ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಆಗಮಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.