ಆ್ಯಪ್ನಗರ

ಸಮ್ಮಿಶ್ರ ಸರಕಾರ ಭಿನ್ನಾಭಿಪ್ರಾಯಗಳಿಂದ ಹೊರತಾಗಿಲ್ಲ: ದೇಶಪಾಂಡೆ

ಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದಲ್ಲಿ ಸಹಜ. ಇದಕ್ಕೆ ಸಮ್ಮಿಶ್ರ ಸರಕಾರ ಹಾಗೂ ಕಾಂಗ್ರೆಸ್‌ ಹೊರತಾಗಿಲ್ಲ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ.

Vijaya Karnataka Web 12 Sep 2018, 5:24 pm
ಹುಬ್ಬಳ್ಳಿ: ಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದಲ್ಲಿ ಸಹಜ. ಇದಕ್ಕೆ ಸಮ್ಮಿಶ್ರ ಸರಕಾರ ಹಾಗೂ ಕಾಂಗ್ರೆಸ್‌ ಹೊರತಾಗಿಲ್ಲ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ.
Vijaya Karnataka Web deshpande


ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಭಿನ್ನಾಭಿಪ್ರಾಯ ಇರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡರು.

ಸರಕಾರ ಜನರ ಪರ ಕೆಲಸ ಮಾಡುತ್ತಿದೆ .ಕೆಲವರು ಸರ್ಕಾರವನ್ನು ಅಸ್ಥಿರಗೊಳಸಲು ಕೆಲಸ ಮಾಡುತಿದ್ದಾರೆ. ಜನರು ಊಹಾಪೋಹಗಳಿಗೆ ಕಿವಿ ಗೊಡಬಾರದು. ಸಮ್ಮಿಶ್ರ ಸರಕಾರ ಸ್ಥಿರವಾಗಿಯೇ ಇದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಸಹಜ. ಅಂತೆಯೇ ಕಾಂಗ್ರೆಸ್‌ನಲ್ಲಿ ಅತೃಪ್ತಿ ಇದೆ. ಸಮ್ಮಿಶ್ರ ಸರಕಾರವೂ ಇದರಿಂದ ಹೊರತಾಗಿಲ್ಲ ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ