ಆ್ಯಪ್ನಗರ

ಸಮಸ್ಯೆ ಪರಿಹಾರಕ್ಕೆ ಚಿಂತನ ಶಕ್ತಿ ಮುಖ್ಯ

ನವಲಗುಂದ : ದೇಶದಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರಲ್ಲಿ ಯುವ ಜನತೆಯ ಚಿಂತನಾ ಶಕ್ತಿ ಬಹು ಮುಖ್ಯವಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು.

Vijaya Karnataka 22 Nov 2018, 5:00 am
ನವಲಗುಂದ : ದೇಶದಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರಲ್ಲಿ ಯುವ ಜನತೆಯ ಚಿಂತನಾ ಶಕ್ತಿ ಬಹು ಮುಖ್ಯವಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು.
Vijaya Karnataka Web thinking energy is important for problem solving
ಸಮಸ್ಯೆ ಪರಿಹಾರಕ್ಕೆ ಚಿಂತನ ಶಕ್ತಿ ಮುಖ್ಯ


ಇಲ್ಲಿನ ಹುರಕಡ್ಲಿ ಅಜ್ಜನವರ ಸಾಂಸ್ಕೃತಿಕ ಭವನದಲ್ಲಿ ತಾಲೂಕು ಯುವ ಕಾಂಗ್ರೆಸ್‌ ಹಾಗೂ ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಿಭಿನ್ನ ವಿಚಾರಗಳ ಮುಖಾಮುಖಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜಕೀಯ ಪಕ್ಷ ಗಳು ಪ್ರಗತಿ ಪರ ವಿಚಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಇಂದಿನ ಯುವ ಪೀಳಿಗೆ ಕಂಡಂತೆ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕೆಂಬ ರಾಹುಲ್‌ ಗಾಂಧಿ ಅವರ ಆಶಯದಂತೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನೋದ್‌ ಅಸೂಟಿ ಮಾತನಾಡಿ, ಉದ್ಯೋಗ ಸೃಷ್ಟಿಗಾಗಿ ಬಹುರಾಷ್ಟ್ರೀಯ ಕಂಪನಿಗಳು ಉತ್ತರ ಕರ್ನಾಟಕದತ್ತ ಮುಖ ಮಾಡಿದರೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸ್ವಲ್ಪ ಮಟ್ಟಿನ ಸಮಾಧಾನ ಸಿಗುವ ಭರವಸೆಯಿದ್ದು, ಈ ನಿಟ್ಟಿನಲ್ಲಿ ಪಕ್ಷ ಭೇದ ಮರೆತು ಶ್ರಮಿಸಬೇಕು ಎಂದರು.

ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ, ಯುವ ಮುಖಂಡರಾದ ಮದನ ಕುಲಕರ್ಣಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡರ, ಕೆ.ಶಿವಕುಮಾರ, ಅರುಣಕುಮಾರ, ಮಂಜು ಜಾಧವ, ವಿದ್ಯಾರ್ಥಿಗಳಾದ ಸೃಷ್ಟಿ ಹಂಪನ್ನವರ, ಯಾಸ್ಮೀನ್‌ ಪಟೇಲ್‌, ಕವಿತಾ ಗೊಬ್ಬರಗುಂಪಿ, ಲಕ್ಷ್ಮೀ ಗೊರವನಕೊಳ್ಳ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ