ಆ್ಯಪ್ನಗರ

ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ಯೋಜನೆಯಡಿ ತೋಳನಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಂಗಳವಾರ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ಯೋಜನೆಯಡಿ 15.57 ಕೋಟಿ ರೂ. ವೆಚ್ಚದಲ್ಲಿಕೈಗೊಂಡ ತೋಳನಕೆರೆ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.

Vijaya Karnataka 19 Dec 2022, 1:49 pm
ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಂಗಳವಾರ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ಯೋಜನೆಯಡಿ 15.57 ಕೋಟಿ ರೂ. ವೆಚ್ಚದಲ್ಲಿಕೈಗೊಂಡ ತೋಳನಕೆರೆ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.
Vijaya Karnataka Web dharawada


ತೋಳನಕೆರೆಗೆ ಭೇಟಿ ನೀಡಿ, ಮಕ್ಕಳು ವೃದ್ಧರನ್ನು ಗಮನದಲ್ಲಿಟ್ಟುಕೊಂಡು ಉದ್ಯಾನ ನಿರ್ಮಿಸಬೇಕು. ಗುಣಮಟ್ಟದ ಪ್ಲೇಯರ್ಸ್‌ ಅಳವಡಿಸಬೇಕು. ಕೆರೆಯ ನೈಸರ್ಗಿಕ ಪರಿಸರ ಕಾಪಾಡಬೇಕು, ವಲಸೆ ಹಕ್ಕಿಗಳ ಆವಾಸ ಸ್ಥಾನ ರಕ್ಷಿಸಬೇಕು. ಉದ್ಯಾನ ಅತಿಕ್ರಮಣ ಹಾಗೂ ಅನಧಿಕೃತ ಪ್ರವೇಶ ಮಾಡದಂತೆ ಸುತ್ತಲೂ ಎತ್ತರದ ಕಾಂಪೌಡ್‌ ನಿರ್ಮಿಸಬೇಕು. ಯಾವುದೇ ಅನೈತಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದರು.

ರಾಮಲಿಂಗೇಶ್ವರ ನಗರ ವಿಮಾನ ನಿಲ್ದಾಣದ ಹಿಂಭಾಗದ ಪ್ರದೇಶದಿಂದ ಆಗಮಿಸುವ ಚರಂಡಿ ನೀರು ನೇರವಾಗಿ ಕೆರೆಗೆ ಸೇರುವುದನ್ನು ಗಮನಿಸಿ, ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೋಟ್ಯಂತರ ರೂ. ಖರ್ಚು ಮಾಡಿ ಕೆರೆ ಅಭಿವೃದ್ಧಿ ಪಡಿಸಿದ್ದರೂ, ಚರಂಡಿ ನೀರು ಕೆರೆಗೆ ಸೇರುತ್ತಿದೆ ಎಂದರೆ ಏನು ಅರ್ಥ ? ಮಹಾನಗರ ಪಾಲಿಕೆ, ಸ್ಮಾರ್ಟ್‌ ಸಿಟಿ ಹಾಗೂ ಒಳಚರಂಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಮನ್ವಯದಿಂದ ಕಾರ್ಯ ನಡೆಸಬೇಕು. ತಿಂಗಳೊಳಗೆ ಇದನ್ನು ಸರಿಪಡಿಸಬೇಕು. ಮುಂದಿನ ಭೇಟಿಯ ವೇಳೆ ಇದನ್ನು ಮತ್ತೊಮ್ಮೆ ಗಮನಿಸಿತ್ತೇನೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಂಗೀತ ಕಾರಂಜಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿ, ಕೊಳಚೆ ನೀರು ಶುದ್ಧೀಕರಣ ಘಟಕಗಳನ್ನು ಸಚಿವರು ವೀಕ್ಷಿಸಿದರು.

ಪಾಲಿಕೆ ಮಾಜಿ ಸದಸ್ಯ ಮಹೇಶ್‌ ಬುರಲಿ, ಮಹಾನಗರ ಪಾಲಿಕೆ ಆಯುಕ್ತ ಸುರೇಶ್‌ ಇಟ್ನಾಳ, ಸ್ಮಾರ್ಟ್‌ ಸಿಟಿ ಯೋಜನಾ ವ್ಯವಸ್ಥಾಪಕ ನಿರ್ದೇಶಕ ಶಕೀಲ್‌ ಅಹಮದ, ಮುಖಂಡರಾದ ಮಲ್ಲಿಕಾರ್ಜುನ ಸವಕಾರ, ಸಂತೋಷ್‌ ಚವ್ಹಾಣ್‌ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ