ಆ್ಯಪ್ನಗರ

ರಾಜ್ಯದ ಪೊಲೀಸರಿಗೆ ವಿದೇಶದಲ್ಲಿ ತರಬೇತಿ

ಹುಬ್ಬಳ್ಳಿ: ವಿದೇಶಿ ಪೊಲೀಸ್‌ ತರಬೇತಿ ಶಾಲೆಗಳಲ್ಲಿರಾಜ್ಯದ ಪೊಲೀಸರಿಗೆ ತರಬೇತಿ ನೀಡುವ ನಿರ್ಣಯವನ್ನು ಸರಕಾರ ಕೈಗೊಂಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Vijaya Karnataka 30 Sep 2019, 5:00 am
ಹುಬ್ಬಳ್ಳಿ: ವಿದೇಶಿ ಪೊಲೀಸ್‌ ತರಬೇತಿ ಶಾಲೆಗಳಲ್ಲಿರಾಜ್ಯದ ಪೊಲೀಸರಿಗೆ ತರಬೇತಿ ನೀಡುವ ನಿರ್ಣಯವನ್ನು ಸರಕಾರ ಕೈಗೊಂಡಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
Vijaya Karnataka Web 29MANJU3C_21
ಹುಬ್ಬಳ್ಳಿ ಗೋಕುಲ್‌ ರಸ್ತೆಯ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯಲ್ಲಿ6ನೇ ತಂಡದ ಪೊಲೀಸ್‌ ಕಾನ್ಸಟೇಬಲ್‌ಗಳ ನಿರ್ಗಮನ ಪಥ ಸಂಚಲನ ನಡೆಯಿತು.


ಗೋಕುಲ ರಸ್ತೆಯ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯಲ್ಲಿಭಾನುವಾರ ನಡೆದ 6ನೇ ತಂಡದ ನಾಗರಿಕ ಪೊಲೀಸ್‌ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥ ಸಂಚಲನ ವೀಕ್ಷಿಸಿ ಮಾತನಾಡಿದ ಅವರು, ಪೊಲೀಸರ ವೇತನ ಪರಿಷ್ಕರಣೆ ಕುರಿತು ಸರಕಾರ ಶೀಘ್ರ ನಿರ್ಧಾರ ಪ್ರಕಟಿಸಲಿದೆ. ರಾಗ- ದ್ವೇಷಗಳಲ್ಲಿದೆ, ಕಾನೂನಿನ್ವಯ ನಿಷ್ಪಕ್ಷಪಾತ, ನಿರ್ಭಯ ಮತ್ತು ನಿರ್ಭಿಡೆಯಿಂದ ಪೊಲೀಸರು ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಸಮಾಜದಲ್ಲಿಶಾಂತಿ ಸುವ್ಯವಸ್ಥೆ ಸ್ಥಾಪಿಸಲು ಸಾಧ್ಯ ಎಂದರು.

ಅರ್ಹತೆ ಮತ್ತು ಪ್ರತಿಭೆಯಿಂದ ಪೊಲೀಸ್‌ ಇಲಾಖೆಯಲ್ಲಿಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿಅನ್ಯಾಯ, ಶೋಷಣೆಗಳಿದ್ದಲ್ಲಿಗೆ ತೆರಳಿ ಬಡವರು, ದೀನ-ದಲಿತರು, ನಿರ್ಗತಿಕರ ಸೇವೆ ಸಲ್ಲಿಸಬೇಕು. ಭಾರತ ಸಂವಿಧಾನದಡಿ ಪೊಲೀಸ್‌ ಕಾನೂನು ರಚನೆಯಾಗಿದೆ. ರಾಜ್ಯದ 14 ಪೊಲೀಸ್‌ ತರಬೇತಿಗಳಲ್ಲಿಸಾವಿರಾರು ಜನರಿಗೆ ದಕ್ಷ ತರಬೇತಿ ನೀಡಲಾಗುತ್ತಿದೆ. ಹಿಂದಿನ ಅಧಿಕಾರಿಗಳು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಇದೇ ಸಂದರ್ಭದಲ್ಲಿವಿವಿಧ ಸ್ಪರ್ಧೆಗಳಲ್ಲಿವಿಜೇತರಾದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ, ಎಲ್ಲವಿಷಯಗಳಲ್ಲಿಅತ್ಯಧಿಕ ಅಂಕ ಗಳಿಸಿದ ಸುರೇಶ ನಾಯಕ ಸರ್ವೋತ್ತಮ ಪ್ರಶಸ್ತಿಗೆ ಪಾತ್ರರಾದರು.

ಆಯುಕ್ತ ಆರ್‌. ದಿಲೀಪ್‌ ಪ್ರಾಸ್ತಾವಿಕ ಮಾತನಾಡಿದರು. ಎಡಿಜಿಪಿ ಡಾ.ಅಮರಕುಮಾರ ಪಾಂಡೆ, ಐಜಿಪಿ ರಾಘವೇಂದ್ರ ಸುಹಾಸ್‌, ಎಸ್‌ಪಿ ವರ್ತಿಕಾ ಕಟಿಯಾರ್‌, ಡಿಸಿಪಿ ಡಾ. ಶಿವಕುಮಾರ ಗುಣಾರೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ