ಆ್ಯಪ್ನಗರ

ದಂಧೆಕೋರರ ಜತೆ ಕೈ ಜೋಡಿಸಿದರೆ ಕಠಿಣ ಕ್ರಮ

ಹುಬ್ಬಳ್ಳಿ : ಹು-ಧಾ ಅವಳಿನಗರದಲ್ಲಿ ಅಕ್ರಮ ದಂಧೆಕೋರರ ನಡೆಸುತ್ತಿರುವವ ಜತೆ ಕೈ ಜೋಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

Vijaya Karnataka 24 Aug 2019, 5:00 am
ಹುಬ್ಬಳ್ಳಿ : ಹು-ಧಾ ಅವಳಿನಗರದಲ್ಲಿ ಅಕ್ರಮ ದಂಧೆಕೋರರ ನಡೆಸುತ್ತಿರುವವ ಜತೆ ಕೈ ಜೋಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.
Vijaya Karnataka Web DRW-23MANJU4D


ಇಲ್ಲಿಯ ಸಿಎಆರ್‌ ಮೈದಾನದಲ್ಲಿ ಶುಕ್ರವಾರ ನಡೆದ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸ್‌ ವ್ಯವಸ್ಥೆ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಪೊಲೀಸರು ಶ್ರಮಿಸಬೇಕು. ಅಕ್ರಮ ಕುಳಗಳಿಗೆ ಜತೆ ಕೈ ಜೋಡಿಸಿದರೆ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು. ಅಲ್ಲದೆ, ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಶಿಸ್ತು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಬಳಿಕ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ನೇತೃತ್ವದಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶ ಹಳೇಹುಬ್ಬಳ್ಳಿಯ ಕಸಬಾಪೇಟೆ, ಕಮರಿಪೇಟ ಸೇರಿದಂತೆ ಹಲವೆಡೆಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಆತ್ಮ ವಿಶ್ವಾಸ ಮೂಡಿಸುವ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಡಿಸಿಪಿಗಳಾದ ಶಿವಕುಮಾರ ಗುಣಾರೆ, ನಾಗೇಶ ಡಿ.ಎಲ್‌. ಸೇರಿದಂತೆ ಪಿಐ ಮತ್ತು ಸಿಬ್ಬಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ