ಆ್ಯಪ್ನಗರ

17 ರಂದು ಉಣಕಲ್ಲ ಸಿದ್ದಪ್ಪಜ್ಜನ ರಥೋತ್ಸವ

ಹುಬ್ಬಳ್ಳಿ : ಶ್ರೀ ಸದ್ಗುರು ಸಿದ್ದಪ್ಪಜ್ಜನವರ ಮೂಲಗದ್ದುಗೆ ಮಠದಿಂದ ಉಣಕಲ್‌ ಸದ್ಗುರು ಸಿದ್ದಪ್ಪಜ್ಜನ ಮಹಾಸ್ವಾಮಿಗಳ 99ನೇ ಪುಣ್ಯತಿಥಿ ಹಾಗೂ ರಥೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಜ.17ರಂದು ಸಂಜೆ 5ಕ್ಕೆ ರಥೋತ್ಸವ ನಡೆಯಲಿದೆ.

Vijaya Karnataka 14 Jan 2020, 5:37 pm
ಹುಬ್ಬಳ್ಳಿ : ಶ್ರೀ ಸದ್ಗುರು ಸಿದ್ದಪ್ಪಜ್ಜನವರ ಮೂಲಗದ್ದುಗೆ ಮಠದಿಂದ ಉಣಕಲ್‌ ಸದ್ಗುರು ಸಿದ್ದಪ್ಪಜ್ಜನ ಮಹಾಸ್ವಾಮಿಗಳ 99ನೇ ಪುಣ್ಯತಿಥಿ ಹಾಗೂ ರಥೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಜ.17ರಂದು ಸಂಜೆ 5ಕ್ಕೆ ರಥೋತ್ಸವ ನಡೆಯಲಿದೆ.
Vijaya Karnataka Web unkalla siddappajjana chariot festival on the 17th
17 ರಂದು ಉಣಕಲ್ಲ ಸಿದ್ದಪ್ಪಜ್ಜನ ರಥೋತ್ಸವ


ಜ.14 ರಿಂದ ಜ.16ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನೆ ಕಾರ್ಯಕ್ರಮಗಳು ನಡೆಯಲಿವೆ. ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ, ಹೊಸಳ್ಳಿಯ ಬೂದೀಶ್ವರ ಸ್ವಾಮೀಜಿ, ಮೂರುಸಾವಿರ ಮಠದ ಗುರುಸಿದ್ಧರಾಜಯೋಗೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಜ.17ರಂದು ಬ್ರಾಹ್ಮಿ ಮುಹೂರ್ತದಲ್ಲಿಶ್ರೀ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಅನ್ನ ಸಂತರ್ಪಣೆ, ನಂತರ ಸದ್ಗುರು ಸಿದ್ದಪ್ಪಜ್ಜನವರ ಮೂಲಗದ್ದುಗೆಯಿಂದ ಶ್ರೀಮಠದ ವರೆಗೆ ವಿವಿಧ ಕಲಾ ತಂಡದೊಂದಿಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ. ಸಂಜೆ 5ಕ್ಕೆ ರಥೋತ್ಸವ ನಡೆಯಲಿದೆ. ಜ.18 ರಂದು ಸಂಜೆ 6ಕ್ಕೆ ಕಡುಬಿನ ಕಾಳಗ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ