ಆ್ಯಪ್ನಗರ

ಲೋಕಸಭೆಗೆ 28 ಕ್ಷೇತ್ರದಲ್ಲೂ ಉತ್ತಮ ಪ್ರಜಾಕೀಯ ಸ್ಪರ್ಧೆ: ಉಪೇಂದ್ರ

ಉತ್ತಮ ಪ್ರಜಾಕೀಯ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಯಲಿದೆ ಎಂದು ರಿಯಲ್ ಸ್ಟಾರ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ತಿಳಿಸಿದರು.

Vijaya Karnataka Web 2 Feb 2019, 3:35 pm
ಹುಬ್ಬಳ್ಳಿ: ರಾಜಕೀಯ ವ್ಯವಸ್ಥೆಯ ತದ್ವಿರುದ್ಧವಾಗಿರುವ ಸಿದ್ದಾಂತಗಳಿಂದ ಹುಟ್ಟಿಕೊಂಡಿರುವ ಉತ್ತಮ ಪ್ರಜಾಕೀಯ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಯಲಿದೆ ಎಂದು ರಿಯಲ್ ಸ್ಟಾರ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ತಿಳಿಸಿದರು.
Vijaya Karnataka Web uppi


ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಸಾಮನ್ಯರ ಸಹಭಾಗಿತ್ವದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರವಾಗಿಯೇ ಶ್ರಮಿಸುವ ಸದುದ್ದೇಶದಿಂದ ಉತ್ತಮ ಪ್ರಜಾಕೀಯ ಪಕ್ಷ ಹುಟ್ಟಿಕೊಂಡಿದ್ದು, ರಾಜಕೀಯ ವ್ಯವಸ್ಥೆಯ ತತ್ವ ಆದರ್ಶಗಳ ಸಂಪೂರ್ಣ ತದ್ವಿರುದ್ಧವಾಗಿರುವ ಪಕ್ಷ ಸಾರ್ವಜನಿಕರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಿದೆ ಎಂದರು.

ಉತ್ತಮ ಪ್ರಜಾಕೀಯ ಪಕ್ಷ ಸೆಲೆಕ್ಷನ್, ಎಲೆಕ್ಷನ್, ಕರೆಕ್ಷನ್, ರಿಜೆಕ್ಷನ್, ಪ್ರಮೋಷನ್ ಸಿದ್ದಾಂತಗಳಿಂದ ರೂಪಿತಗೊಂಡಿದ್ದು, ಜನ ಸಾಮಾನ್ಯರನ್ನು ಸಹಭಾಗಿತ್ವದ ಮೂಲಕ ಅಭಿವೃದ್ಧಿಗೆ ಶ್ರಮಿಸುವುದೇ ಪ್ರಜಾಕೀಯ ಪಕ್ಷದ ಉದ್ದೇಶವಾಗಿದೆ. ಉತ್ತಮ ಪ್ರಜಾಕೀಯ ಪಕ್ಷ ಮೂಲತಃ ಎರಡು ಪ್ರಣಾಳಿಕೆಗಳನ್ನು ಹುಟ್ಟು ಹಾಕಿದ್ದು, ಇಲ್ಲಿ ಜನರಿಗೆ ಏನು ಬೇಕು ಜನರಿಗೆ ಏನು ಅವಶ್ಯಕತೆ ಇದೆ ಎಂಬುದನ್ನು ಜನರು ತಾವೇ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ