ಆ್ಯಪ್ನಗರ

ಉ.ಕರ್ನಾಟಕದ ಬಗ್ಗೆ ಮೈತ್ರಿ ಸರಕಾರದ ನಿಷ್ಕಾಳಜಿ: ಪ್ರತಿಭಟನೆಗೆ ಸಿದ್ದ ಎಂದ ವಾಟಾಳ್

ಉತ್ತರ ಕರ್ನಾಟಕ ಅಭಿವೃದ್ಧಿಗೆ ಮೈತ್ರಿ ಸರಕಾರ ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.

Vijaya Karnataka Web 4 Jul 2019, 2:11 pm
ಹುಬ್ಬಳ್ಳಿ: ಉತ್ತರ ಕರ್ನಾಟಕ ಅಭಿವೃದ್ಧಿಗೆ ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಹೀಗಾಗಿ ಅಗಸ್ಟ್ 12 ರಂದು ಉತ್ತರ ಕರ್ನಾಟಕದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದರು ಹೋರಾಟ ಮಾಡುತ್ತೇನೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web vatal


ನಗರದಲ್ಲಿಂದು ಹಿರಿಯ ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ ಅವರನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜೂಂಡಪ್ಪ ವರದಿಯನ್ನು ಸರಿಯಾಗಿ ಅನುಷ್ಠಾನ ಮಾಡಲಾಗಿಲ್ಲ. ಮಹದಾಯಿ ವಿಷಯದಲ್ಲಿ ರಾಜ್ಯ ಸರಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರು.

ಜಿಂದಾಲ್ ಉಳಿಸಿಕೊಳ್ಳಲು ಒಬ್ಬ ಮಂತ್ರಿಯನ್ನೇ ನೇಮಕ ಮಾಡುತ್ತಾರೆ. ಅದರೆ ಮಹದಾಯಿ ವಿಷಯದಲ್ಲಿ ಮಾತ್ರ ಮೌನವಹಿಸುತ್ತಾರೆ. ಹೀಗಾಗಿ ಅಗಸ್ಟ್ 12ರಂದು ಉತ್ತರ ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಬೀದರ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಲಗಿ ಹೋರಾಟ ಮಾಡುವುದಾಗಿ ತಿಳಿಸಿದ ಅವರು, ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಶಾಸಕರ ರಾಜೀನಾಮೆ ಕುರಿತು ಮಾತನಾಡಿದ ಅವರು, ಶಾಸಕರು ಹಾದಿ ಬೀದಿಯಲ್ಲಿ ಹೋಗುವವರಿಗೆ ರಾಜೀನಾಮೆ ಕೊಡುವುದಕ್ಕೆ ಆಗುವುದಿಲ್ಲ. ರಾಜ್ಯಪಾಲರಿಗೆ ರಾಜೀನಾಮೆ ಕೊಡುವ ಬದಲು ಸ್ಪೀಕರ್ ಅವರಿಗೆ ಕೊಡಬೇಕು. ಇದು ಬ್ಲ್ಯಾಕ್ ಮೇಲ್ ತಂತ್ರ ಎಂದು ಅವರು ಹೇಳಿದರು.

ಬಿಜೆಪಿಯವರ ನಡೆ ಸರಿಯಿಲ್ಲ. ಬಿಜೆಪಿಯವರ ಬಹಿರಂಗವಾಗಿ ವ್ಯಾಪಾರಕ್ಕೆ ಇಳದಿದ್ದಾರೆ.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಗ್ಯಾರಂಟಿ ಬರುತ್ತದೆ ಎಂದು ವಾಟಾಳ್ ನಾಗರಾಜ್ ಭವಿಷ್ಯ ನುಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ