ಆ್ಯಪ್ನಗರ

ಬೇಂದ್ರೆ ಪುತ್ರ ವಾಮನ ಬೇಂದ್ರೆ ಇನ್ನಿಲ್ಲ

ವರಕವಿ ದ.ರಾ.ಬೇಂದ್ರೆ ಅವರ ಮಗ ಡಾ.ವಾಮನ ಬೇಂದ್ರೆ(82) ಹುಬ್ಬಳ್ಳಿಯಲ್ಲಿ ಬುಧವಾರ ಬೆಳಗ್ಗೆ ನಿಧನರಾದರು.

ವಿಕ ಸುದ್ದಿಲೋಕ 28 Sep 2016, 8:56 am
ಹುಬ್ಬಳ್ಳಿ: ವರಕವಿ ದ.ರಾ.ಬೇಂದ್ರೆ ಅವರ ಮಗ ಡಾ.ವಾಮನ ಬೇಂದ್ರೆ (82) ಹುಬ್ಬಳ್ಳಿಯಲ್ಲಿ ಬುಧವಾರ ಬೆಳಗ್ಗೆ ನಿಧನರಾದರು.
Vijaya Karnataka Web vaman bendre is no more
ಬೇಂದ್ರೆ ಪುತ್ರ ವಾಮನ ಬೇಂದ್ರೆ ಇನ್ನಿಲ್ಲ



ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಮನ ಬೇಂದ್ರೆ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶರ್ಮಾ ಕುಟೀರದಲ್ಲಿ ಪಾರ್ಥಿವ ಶರೀರವನ್ನುಇರಿಸಲಾಗಿದ್ದು, ಧಾರವಾಡದ ದ.ರಾ.ಬೇಂದ್ರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಸಂಜೆ ಹೊಸ ಯಲ್ಲಾಪುರದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಸಾಹಿತಿ, ಪ್ರಾಧ್ಯಾಪಕರಾಗಿದ್ದ ವಾಮನಬೇಂದ್ರೆ 150ಕ್ಕೂ ಹೆಚ್ಚಿನ ಪ್ರಕಟಣೆಗಳನ್ನು ಮಾಡಿದ್ದರು. ಸಾಂಗ್ಲಿಯ ವೆಲ್ಲಿಂಗ್‌ಡನ್ ಕಾಲೇಜಿನಲ್ಲಿ ಉದ್ಯೋಗ ಪ್ರಾರಂಭಿಸಿದ್ದ ವಾಮನ ಬೇಂದ್ರೆಯವರು ನಂತರ ಧಾರವಾಡದ ವಿದ್ಯಾರಣ್ಯ ಕಿರಿಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಕಿಟಲ್ ಕಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಅಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದರು.

ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಿದ್ಯಾರಣ್ಯ ಪ್ರಶಸ್ತಿ, ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪರಶುರಾಮ ಪ್ರಶಸ್ತಿ, ಕನ್ನಡ-ಮರಾಠಿ ಭಾಷಾ ಬಾಂಧವ್ಯ ಪ್ರಶಸ್ತಿ, ಶ್ರೀವರದರಾಜ ಆದ್ಯ ಸಾಹಿತ್ಯ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿ ಗೌರವಗಳು ವಾಮನ ಬೇಂದ್ರೆಯವರಿಗೆ ಸಂದಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ