ಆ್ಯಪ್ನಗರ

ನೆರೆ ಪರಿಹಾರಕ್ಕಾಗಿ ವಾಟಾಳ ಉರುಳು ಸೇವೆ

ಹುಬ್ಬಳ್ಳಿ : ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರಕಾರ ವಿಳಂಬ ಧೋರಣೆ ತೋರುತ್ತಿರುವುದನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ ನಗರದ ಚನ್ನಮ್ಮ ವೃತ್ತದಲ್ಲಿಸೋಮವಾರ ಉರಳು ಸೇವೆ ನಡೆಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

Vijaya Karnataka 24 Sep 2019, 5:00 am
ಹುಬ್ಬಳ್ಳಿ : ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರಕಾರ ವಿಳಂಬ ಧೋರಣೆ ತೋರುತ್ತಿರುವುದನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ ನಗರದ ಚನ್ನಮ್ಮ ವೃತ್ತದಲ್ಲಿಸೋಮವಾರ ಉರಳು ಸೇವೆ ನಡೆಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
Vijaya Karnataka Web vatal service for victim relief
ನೆರೆ ಪರಿಹಾರಕ್ಕಾಗಿ ವಾಟಾಳ ಉರುಳು ಸೇವೆ


ಈ ವೇಳೆ ರಸ್ತೆ ಮಧ್ಯೆ ಉರಳು ಸೇವೆ ನಡೆಸುತ್ತಿದ್ದ ಕಾರಣ ಪೊಲೀಸರು ಅವರನ್ನು ಬಂಧಿಸಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿತಕ್ಷಣವೇ ಕೇಂದ್ರ ಸರಕಾರ 50 ಸಾವಿರ ಕೋಟಿ ರೂ. ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಪರಿಹಾರ ಘೋಷಣೆಯಲ್ಲಿಕೇಂದ್ರ ಹಾಗೂ ರಾಜ್ಯ ಸರಕಾರ ತಾರತಮ್ಯ ಅನುಸರಿಸುತ್ತಿವೆ. ಅಲ್ಲದೆ, ರಾಜ್ಯ ಸರಕಾರ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸುತ್ತಲೇ ಬಂದಿದೆ. ಈ ಭಾಗದ ಜನರು ಏನೇ ಪಡೆಯುವುದಿದ್ದರೂ ಹೋರಾಟ ಮಾಡಿಯೇ ಪಡೆಯಬೇಕಾದ ಪರಿಸ್ಥಿತಿ ಎದುರಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಕಿಡಿಕಾರಿದರು.

ನೆರೆಯಿಂದ ಈ ಭಾಗದ ಜನರು ಮನೆ, ಜಾನುವಾರು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದೆ. ಈ ಸಂದರ್ಭದಲ್ಲಿಅವರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ನಿಲ್ಲಬೇಕು. ಕೇಂದ್ರ ಸರಕಾರ ಕೇವಲ ಸಮೀಕ್ಷೆ ಮಾಡುತ್ತಿದೆ. ಆದರೆ ಪರಿಹಾರ ಮಾತ್ರ ಬಿಡುಗಡೆ ಮಾಡುತ್ತಿಲ್ಲ. ಇನ್ನು ರಾಜ್ಯ ಸರಕಾರ ಅಲ್ಪಮಟ್ಟಿನ ಹಣ ಬಿಡುಗಡೆ ಮಾಡಿದೆಯಾದರೂ, ಇದು ನೆರೆ ಪೀಡಿತ ಹೊಸ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಬೇಕು ಎಂದು ಒತ್ತಾಯಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಅಮೃತ ಇಜಾರೆ, ಮಹೇಶ ಪತ್ತಾರ, ವಿನೋದ ಕ್ಯಾರಕಟ್ಟಿ, ಸಚಿನ ಗಾಣಗೇರ, ವಿಶಾಲ ಕ್ಯಾರಕಟ್ಟಿ, ಸಂಜೀವ ದುಮ್ಮಕ್ಕನಾಳ ಇತರರು ಇದ್ದರು.

ಮಹದಾಯಿ ನ್ಯಾಯಾಧೀಕರಣ ನೀಡಿದ ತೀರ್ಪಿನನ್ವಯ ಕೇಂದ್ರ ಸರಕಾರ ಶೀಘ್ರವೇ ಗೆಜೆಟ್‌ ನೋಟಿಫಿಕೇಶನ್‌ ಮಾಡಬೇಕು. ಇಲ್ಲದಿದ್ದರೆ, ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ವಾಟಾಳ ನಾಗರಾಜ್‌ ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ