ಸಂತ್ರಸ್ತರಿಗೆ ‘ಕುರುಕ್ಷೇತ್ರ’ ಸಂಭಾವನೆ: ನಿಖಿಲ್
ಹುಬ್ಬಳ್ಳಿ : ಕುರುಕ್ಷೇತ್ರ ಸಿನಿಮಾದಿಂದ ಬಂದ ಸಂಭಾವನೆಯನ್ನು ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ನೀಡುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದ್ದಾರೆ.
Vijaya Karnataka 13 Aug 2019, 5:00 am
ಹುಬ್ಬಳ್ಳಿ : ಕುರುಕ್ಷೇತ್ರ ಸಿನಿಮಾದಿಂದ ಬಂದ ಸಂಭಾವನೆಯನ್ನು ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ನೀಡುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೊಳಗಾದ ಇಲ್ಲಿಯ ದೇವಿನಗರ, ಭೈರಿದೇವರಕೊಪ್ಪ, ಉಣಕಲ್ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ''ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಾವಿರಾರು ಕೋಟಿ ರೂ.ಗೂ ಹೆಚ್ಚು ಆಸ್ತಿ ನಷ್ಟವಾಗಿದೆ. ಹೀಗಾಗಿ ಇದನ್ನು ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಅಗತ್ಯ ಅನುದಾನ ನೀಡಲು ಮುಂದಾಗಬೇಕು'' ಎಂದು ಆಗ್ರಹಿಸಿದರು.
''ಅತಿವೃಷ್ಟಿಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಸಂತ್ರಸ್ತರ ನೋವು, ಗೋಳಾಟ ನೋಡಲಾಗುತ್ತಿಲ್ಲ. ಅನೇಕರ ಬದುಕು ಬೀದಿಗೆ ಬಿದ್ದಿದೆ. ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಹಾಳಾಗಿವೆ. ಸಂತ್ರಸ್ತರಿಗೆ ನೆರವಾಗಲು ಜೆಡಿಎಸ್ ರಾಜ್ಯ ಘಟಕ ಅಗತ್ಯ ವಸ್ತುಗಳ ಪೂರೈಕೆಗೆ ಮುಂದಾಗಿದೆ'' ಎಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ ಸೇರಿದಂತೆ ಇತರರು ಇದ್ದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಇಲ್ಲಿಯ ದೇವಿನಗರ, ಭೈರಿದೇವರಕೊಪ್ಪ, ಉಣಕಲ್ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ''ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಾವಿರಾರು ಕೋಟಿ ರೂ.ಗೂ ಹೆಚ್ಚು ಆಸ್ತಿ ನಷ್ಟವಾಗಿದೆ. ಹೀಗಾಗಿ ಇದನ್ನು ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಅಗತ್ಯ ಅನುದಾನ ನೀಡಲು ಮುಂದಾಗಬೇಕು'' ಎಂದು ಆಗ್ರಹಿಸಿದರು.
''ಅತಿವೃಷ್ಟಿಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಸಂತ್ರಸ್ತರ ನೋವು, ಗೋಳಾಟ ನೋಡಲಾಗುತ್ತಿಲ್ಲ. ಅನೇಕರ ಬದುಕು ಬೀದಿಗೆ ಬಿದ್ದಿದೆ. ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಹಾಳಾಗಿವೆ. ಸಂತ್ರಸ್ತರಿಗೆ ನೆರವಾಗಲು ಜೆಡಿಎಸ್ ರಾಜ್ಯ ಘಟಕ ಅಗತ್ಯ ವಸ್ತುಗಳ ಪೂರೈಕೆಗೆ ಮುಂದಾಗಿದೆ'' ಎಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ ಸೇರಿದಂತೆ ಇತರರು ಇದ್ದರು.