ಆ್ಯಪ್ನಗರ

ಹುಬ್ಬಳ್ಳಿಯಲ್ಲಿ ಇಂದು ವಿನಯ್‌ ಬೈಕ್‌ ರಾರ‍ಯಲಿ

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಪಕ್ಷ ದ ಅಭ್ಯರ್ಥಿ ವಿನಯ ಕುಲಕರ್ಣಿ ಅವರು ಏ.14 ರಂದು ಬೆಳಗ್ಗೆ 11.30 ರಿಂದ ವಿವಿಧೆಡೆ ಬೈಕ್‌ ರಾರ‍ಯಲಿ ಮೂಲಕ ಪ್ರಚಾರ ನಡೆಸಲಿದ್ದಾರೆ.

Vijaya Karnataka 14 Apr 2019, 5:00 am
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಪಕ್ಷ ದ ಅಭ್ಯರ್ಥಿ ವಿನಯ ಕುಲಕರ್ಣಿ ಅವರು ಏ.14 ರಂದು ಬೆಳಗ್ಗೆ 11.30 ರಿಂದ ವಿವಿಧೆಡೆ ಬೈಕ್‌ ರಾರ‍ಯಲಿ ಮೂಲಕ ಪ್ರಚಾರ ನಡೆಸಲಿದ್ದಾರೆ.
Vijaya Karnataka Web vinay bikes rally today in hubli
ಹುಬ್ಬಳ್ಳಿಯಲ್ಲಿ ಇಂದು ವಿನಯ್‌ ಬೈಕ್‌ ರಾರ‍ಯಲಿ


ಮಂಟೂರು ರಸ್ತೆಯ ಅಹ್ಮದ್‌ ಪ್ಲಾಟ್‌ ಮುಖ್ಯರಸ್ತೆಯಿಂದ ಆರಂಭವಾಗುವ ಬೈಕ್‌ ರಾರ‍ಯಲಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ, ಶಾಸಕ ಪ್ರಸಾದ ಅಬ್ಬಯ್ಯ, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ಅನಿಲಕುಮಾರ ಪಾಟೀಲ ಸೇರಿದಂತೆ ಪಾಲಿಕೆ ಮಾಜಿ ಸದಸ್ಯರು, ಇತರೆ ಗಣ್ಯರು, ಮುಖಂಡರು, ಪಕ್ಷ ದ ವಿವಿಧ ಘಟಕಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.

ಬೈಕ್‌ ರಾರ‍ಯಲಿಯು ಮಂಟೂರು ರಸ್ತೆಯಿಂದ ಆರಂಭವಾಗಿ ಗಣೇಶಪೇಟೆ, ಸಿಬಿಟಿ, ಮಂಗಳವಾರ ಪೇಟೆ, ಸೆಟ್ಲಮೆಂಟ್‌, ಕೆ.ಬಿ. ನಗರ, ಯಲ್ಲಾಪುರ ಓಣಿ, ವೀರಾಪುರ ಓಣಿ, ಬಂಕಾಪುರ ಚೌಕ್‌, ಇಸ್ಲಾಂಪುರ, ಹಳೇ ಹುಬ್ಬಳ್ಳಿ ವೃತ್ತ, ಬಮ್ಮಾಪುರ ಓಣಿ, ಅಕ್ಕಿಹೊಂಡ., ದಾಜೀಬಾನ್‌ ಪೇಟೆ ಸೇರಿದಂತೆ ಇನ್ನಿತರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೂರುಸಾವಿರ ಮಠದ ಆವರಣದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ