ಆ್ಯಪ್ನಗರ

ವಿನಯ ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಬ್ಯಾಕ್‌ ಪೇನ್‌, ಬಿಪಿ ಏರಿಳಿತ ಸಮಸ್ಯೆ ಹೇಳಿಕೊಂಡ ಮಾಜಿ ಸಚಿವ ವಿನಯಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಕ ಸುದ್ದಿಲೋಕ ಧಾರವಾಡಜಿಪಂ ಸದಸ್ಯ ಯೋಗೀಶಗೌಡ ಕೊಲೆ ...

Vijaya Karnataka Web 23 Nov 2020, 11:40 pm
ಧಾರವಾಡ: ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಧಾರವಾಡ 3ನೇ ಹೆಚ್ಚುವರಿ ಜಿಲ್ಲಾಹಾಗೂ ವಿಶೇಷ ಸಿಬಿಐ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ.
Vijaya Karnataka Web ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ


ಕಳೆದ ವಿಚಾರಣೆಯಲ್ಲಿ ನೀಡಿದ್ದ 14 ದಿನದ ನ್ಯಾಯಾಂಗ ಬಂಧನದ ಅವಧಿ ಸೋಮವಾರಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಬೆಳಗಾವಿ ಹಿಂಡಲಗಾ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯ ವಿಚಾರಣೆ ನಡೆಸಿತು.

ಈ ವೇಳೆ ''ಜೈಲಿನಲ್ಲಿ ನಿಮಗೆ ತೊಂದರೆ ಇದೆಯಾ?'' ಎಂಬ ನ್ಯಾಯಾಧೀಶರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿನಯ ಕುಲಕರ್ಣಿ, ''ನನಗೆ ಬ್ಯಾಕ್‌ ಪೇನ್‌ ಹಾಗೂ ಆಗಾಗ ಬಿಪಿ ಹೆಚ್ಚು ಕಡಿಮೆ ಆಗುತ್ತಿದೆ'' ಎಂದರು. ಆಗ ನ್ಯಾಯಾಧೀಶರು, ''ನಿಮ್ಮ ಸಮಸ್ಯೆ ಬಗ್ಗೆ ಜೈಲು ಅಧಿಕಾರಿಗಳಿಗೆ ತಿಳಿಸಿ, ಚಿಕಿತ್ಸೆ ಪಡೆದುಕೊಳ್ಳಿ'' ಎಂದು ಸೂಚಿಸಿದರು.

ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಹೀಗಾಗಿ ಆರೋಪಿತರ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಸಿಬಿಐ ಪರ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ವಿನಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಡಿ. 7ಕ್ಕೆ ವಿಚಾರಣೆ ಮುಂದೂಡಿದರು.

ಮತ್ತೆ ಜಾಮೀನು ಅರ್ಜಿ

ಇತ್ತೀಚೆಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದುಕೊಂಡಿದ್ದ ವಿನಯ ಕುಲಕರ್ಣಿ ಪರ ವಕೀಲರು ಇಷ್ಟರಲ್ಲೇ ಅನಾರೋಗ್ಯ ಕಾರಣ ನೀಡಿ ಮತ್ತೆ ಹೊಸದಾಗಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ