ಆ್ಯಪ್ನಗರ

ಮತದಾರರ ಜಾಗೃತಿ ಬೈಕ್‌ ರಾರ‍ಯಲಿಗೆ ಚಾಲನೆ

ಧಾರವಾಡ : ಕಲಘಟಗಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ಪಟ್ಟಣ ಪಂಚಾಯಿತಿ, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಶಿಕ್ಷ ಕರ ಸಂಘಟನೆಗಳ ಆಶ್ರಯದಲ್ಲಿ ನಡೆದ ಮತದಾರರ ಜಾಗೃತಿ ಬೈಕ್‌ ರಾರ‍ಯಲಿಗೆ ಕಲಘಟಗಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಚಾಲನೆ ನೀಡಿದರು.

Vijaya Karnataka 16 Mar 2019, 5:00 am
ಧಾರವಾಡ : ಕಲಘಟಗಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ಪಟ್ಟಣ ಪಂಚಾಯಿತಿ, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಶಿಕ್ಷ ಕರ ಸಂಘಟನೆಗಳ ಆಶ್ರಯದಲ್ಲಿ ನಡೆದ ಮತದಾರರ ಜಾಗೃತಿ ಬೈಕ್‌ ರಾರ‍ಯಲಿಗೆ ಕಲಘಟಗಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಚಾಲನೆ ನೀಡಿದರು.
Vijaya Karnataka Web voter awareness drive to rally
ಮತದಾರರ ಜಾಗೃತಿ ಬೈಕ್‌ ರಾರ‍ಯಲಿಗೆ ಚಾಲನೆ


ಬಳಿಕ ಮಾತನಾಡಿ ಅವರು, ಬರುವ ಲೋಕಸಭೆ ಚುನಾವಣೆಯಲ್ಲಿ ಕಲಘಟಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಬೇಕು. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‌ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲ ಮತಗಟ್ಟೆ ವ್ಯಾಪ್ತಿಗಳಲ್ಲಿ ಆಯೋಜಿಸಬೇಕು ಎಂದರು.

ಇದೇ ವೇಳೆ ಕಲಘಟಗಿಯ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾರ‍ಯಲಿ ಸಂಚರಿಸಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಶೇಖರ, ಕ್ಷೇತ್ರಶಿಕ್ಷ ಣಾಧಿಕಾರಿ ಉಮಾದೇವಿ ಬಸಾಪೂರ, ಶಿಕ್ಷ ಣ ಸಮನ್ವಯಾಧಿಕಾರಿ ಮಹಾವೀರ ಹಂಚಿನಾಳ, ಎಸ್‌.ಎ. ಚಿಕ್ಕನರ್ತಿ ರಾರ‍ಯಲಿಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ