ಆ್ಯಪ್ನಗರ

ಮತದಾರರ ಯಾದಿ ಪರಿಷ್ಕರಣೆ ಪರಿಶೀಲನೆ

ಧಾರವಾಡ : ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2019 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಮತದಾರರ ಯಾದಿಯಲ್ಲಿನ ಮತದಾರರ ವಿವರಗಳನ್ನು ಪರಿಶೀಲಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ದೀಪಾ ತಿಳಿಸಿದ್ದಾರೆ.

Vijaya Karnataka 31 Aug 2019, 5:00 am
ಧಾರವಾಡ : ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2019 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಮತದಾರರ ಯಾದಿಯಲ್ಲಿನ ಮತದಾರರ ವಿವರಗಳನ್ನು ಪರಿಶೀಲಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ದೀಪಾ ತಿಳಿಸಿದ್ದಾರೆ.
Vijaya Karnataka Web voter revision check
ಮತದಾರರ ಯಾದಿ ಪರಿಷ್ಕರಣೆ ಪರಿಶೀಲನೆ


ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಲಭ್ಯವಿರುವ ಮತದಾರರ ಯಾದಿಯಲ್ಲಿನ ತಮ್ಮ ವಿವರವನ್ನು ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ. ಸೆ.1 ರಂದು ಮತದಾರರ ಯಾದಿಯಲ್ಲಿನ ಮತದಾರರ ವಿವರಗಳನ್ನು ಪರಿಶೀಲಿಸುವ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಜನೆವರಿ 01, 2020 ಕ್ಕೆ 18 ವರ್ಷ ತುಂಬುವ ಅರ್ಹ ನಾಗರಿಕರು ಮತದಾರರ ಯಾದಿಗೆ ತಮ್ಮ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಮತ್ತು ಮತದಾರರು ತಿದ್ದುಪಡಿ, ವರ್ಗಾವಣೆ ಹಾಗೂ ಬಿಡತಕ್ಕವುಗಳ ಕುರಿತು ಅವಶ್ಯವಿದ್ದಲ್ಲಿ ಅರ್ಜಿಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.

ನೇರವಾಗಿ ಮತದಾರರ ನೋಂದಣಾಧಿಕಾರಿಗಳು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ. ಈ ಕುರಿತು ಶುಕ್ರವಾರ ಸಂಜೆ ಜರುಗಿದ ವಿಡಿಯೋ ಸಂವಾದದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ದೀಪಾ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ