ಆ್ಯಪ್ನಗರ

31ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹ

ನವಲಗುಂದ: ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಮಲಪ್ರಭಾ ಕಾಲುವೆಯಿಂದ ನೀರು ಹರಿಸುವುದನ್ನು ಡಿ.20 ರಂದು ಸ್ಥಗಿತಗೊಳಿಸಲಾಗುವುದು ಎಂದು ಮಲಪ್ರಭಾ ಮಹಾಮಂಡಳದವರು ಪ್ರಕಟಿಸಿದ್ದಾರೆ. ಇದರಿಂದಾಗಿ ಹಿಂಗಾರು ಬೆಳೆಗಳಿಗೆ ತೇವಾಂಶದ ಕೊರತೆ ಆಗುವ ಸಾಧ್ಯತೆ

Vijaya Karnataka 18 Dec 2018, 5:00 am
ನವಲಗುಂದ: ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಮಲಪ್ರಭಾ ಕಾಲುವೆಯಿಂದ ನೀರು ಹರಿಸುವುದನ್ನು ಡಿ.20 ರಂದು ಸ್ಥಗಿತಗೊಳಿಸಲಾಗುವುದು ಎಂದು ಮಲಪ್ರಭಾ ಮಹಾಮಂಡಳದವರು ಪ್ರಕಟಿಸಿದ್ದಾರೆ. ಇದರಿಂದಾಗಿ ಹಿಂಗಾರು ಬೆಳೆಗಳಿಗೆ ತೇವಾಂಶದ ಕೊರತೆ ಆಗುವ ಸಾಧ್ಯತೆ ಇದ್ದು, ನೀರು ಹರಿಸುವುದನ್ನು ಡಿ.31 ರ ವರೆಗೆ ವಿಸ್ತರಿಬೇಕೆಂದು ತಾಲೂಕು ಬಿಜೆಪಿ ರೈತ ಮೋರ್ಚಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗನಗೌಡ ಪಾಟೀಲ ಆಗ್ರಹಿಸಿದ್ದಾರೆ.
Vijaya Karnataka Web water is required to water the canal until 31st
31ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹ


ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು ಕಳೆದ ಮೂರ್ನಾಲ್ಕು ವರ್ಷದಿಂದ ಸತತ ಬರಗಾಲದಿಂದ ರೈತರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಈ ವರ್ಷವು ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದ್ದರಿಂದ ನವಲಗುಂದ ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ನೀರಾವರಿ ಪ್ರದೇಶ ಹಾಗೂ ಬೆಣ್ಣೆಹಳ್ಳದ ವ್ಯಾಪ್ತಿಯಲ್ಲಿನ ಜನರು ಜಮೀನುಗಳಿಗೆ ನೀರುಣಿಸಿ ಕಡಲೆ, ಜೋಳ ಹಾಗೂ ಗೋದಿ ಬೆಳೆಯನ್ನು ಬೆಳೆಯುತ್ತಿದ್ದಾರೆ. ಡಿ.20 ರಂದು ನೀರು ಹರಿಸುವುದನ್ನು ನಿಲ್ಲಿಸಿದರೆ ಬೆಳೆಗಳು ತೇವಾಂಶದ ಕೊರತೆಯಿಂದಾಗಿ ಬಾಡಿ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಕಾರಣ ಡಿ.31ರ ವರೆಗೆ ಕಾಲುವೆ ನೀರು ಹರಿಸಿದರೆ ಹಿಂಗಾರು ಬೆಳೆಯನ್ನು ಹಾಗೂ ದನಕರುಗಳಿಗೆ ಮೇವು, ಹುಲ್ಲು ಬೆಳೆಯಲು ಅನುಕೂಲವಾಗುತ್ತದೆ. ಅಷ್ಟೇ ಅಲ್ಲದೇ ಗ್ರಾಮೀಣ ಭಾಗದ ಕುಡಿಯುವ ನೀರಿನ ಅಭಾವವನ್ನು ನೀಗಿಸಿದಂತಾಗುತ್ತದೆ. ಜಿಲ್ಲಧಿಕಾರಿಗಳು ರೈತರ ಸಂಕಷ್ಟವನ್ನು ಅರಿತುಕೊಂಡು ಮಲಪ್ರಭಾ ಮಹಾಮಂಡಳದ ಅಧಿಕಾರಿಗಳಿಗೆ ವಸ್ತು ಸ್ಥಿತಿ ವಿವರಿಸಿ ನೀರು ಬಿಡಲು ಸಹಕರಿಸುವಂತೆ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ