ಆ್ಯಪ್ನಗರ

ಯುಪಿಎ ಅವಧಿಯಲ್ಲಿ 12 ಏರ್‌ಸ್ಟ್ರೈಕ್, ಆದ್ರೆ ರಾಜಕೀಯಕ್ಕೆ ಬಳಸಿಕೊಂಡಿಲ್ಲ: ಖರ್ಗೆ

ಯುಪಿಎ ಎರಡು ಅವಧಿಯಲ್ಲೂ 12 ಏರ್ ಸ್ಟ್ರೈಕ್ ಮಾಡಿದ್ದೇವೆ. ಆದರೆ, ಸೈನಿಕರ ದಾಳಿಯನ್ನು ರಾಜಕೀಯಕ್ಕೆ ಬಳಸಿಲ್ಲ

Vijaya Karnataka Web 9 Mar 2019, 2:34 pm
ಹುಬ್ಬಳ್ಳಿ: ಸೈನಿಕರ ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ದೇಶದ ವಿಚಾರ ಬಂದಾಗ ಒಗ್ಗಟ್ಟಾಗಿ ಎದುರಿಸಲು ಸಿದ್ದವಾಗಬೇಕು. ಈ ಬಗ್ಗೆ ರಾಹುಲ್ ಗಾಂಧಿ ಸಹ ಸ್ಪಷ್ಟಪಡಿಸಿದ್ದಾರೆ. ನಾವು ಕೂಡ ವಾಯು ಸೇನೆ ದಾಳಿಯನ್ನು ಸಮರ್ಥನೆ ಮಾಡಿಕೊಂಡಿದ್ದೇವೆ. ಯುಪಿಎ ಎರಡು ಅವಧಿಯಲ್ಲೂ 12 ಏರ್ ಸ್ಟ್ರೈಕ್ ಮಾಡಿದ್ದೇವೆ. ಆದರೆ, ಸೈನಿಕರ ದಾಳಿಯನ್ನು ರಾಜಕೀಯಕ್ಕೆ ಬಳಸಿಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.
Vijaya Karnataka Web kharge2


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿರು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಿಲ್ಲ. ಹೀಗಾಗಿ, ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿರುತ್ತಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಇಎಸ್‌ಐ ಆಸ್ಪತ್ರೆ, ರೈಲ್ವೆ ಕೋಚ್ ತಯಾರಿಕಾ ಘಟಕ ಆರಂಭಿಸಿದ್ದೇವೆ. ನಮ್ಮ ಅವಧಿಯಲ್ಲಿನ ಕೆಲಸಗಳನ್ನು ಪೂರ್ಣಗೊಳಿಸಿ, ನಾವೇ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅಷ್ಟಕ್ಕೂ, ಹೈದರಾಬಾದ್ ಕರ್ನಾಟಕಕ್ಕೆ ಮೋದಿ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಪೈಕಿ ಎಷ್ಟನ್ನು ಈಡೇರಿಸಿದ್ದಾರೆ ಎಂಬ ಬಗ್ಗೆ ಹೇಳುತ್ತಿಲ್ಲ. ಉದ್ಯೋಗ ಸೃಷ್ಟಿ ಭರವಸೆ ಹುಸಿಯಾಗಿದೆ. ಕಪ್ಪು ಹಣ ತಂದು ಬಡವರಿಗೆ ಹಂಚುವ ಭರವಸೆ ಏನಾಯಿತು. ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದರು. ಅದು ಯಾವ ರೈತರಿಗೆ ಸಿಕ್ಕಿದೆ ಎಂದರು.

ವ್ಯಕ್ತಿಗತವಾಗಿ ನನ್ನ ಮೇಲೆ ಪ್ರೀತಿ ಇರುವ ಕಾರಣ ಮೋದಿ ಕಲಬುರಗಿ ಬಂದು ಪ್ರಚಾರ ಮಾಡಿದ್ದಾರೆ. ಇನ್ನಷ್ಟು ಕೇಂದ್ರದ ನಾಯಕರು ನನ್ನ ಕ್ಷೇತ್ರಕ್ಕೆ ಬರುವವರಿದ್ದಾರೆ.ಯಾರೇ ಬಂದರೂ, ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ನನ್ನನ್ನು ಏನೂ ಮಾಡುಲು ಆಗಲ್ಲ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ