ಆ್ಯಪ್ನಗರ

ವಿಶ್ವ ತಾಯಂದಿರ ದಿನ: ಉಚಿತ ಶಿಬಿರ

ಧಾರವಾಡ : ಆಧುನಿಕ ವೈಜ್ಞಾನಿಕ ಸಂಶೋಧನೆಗಳು ಮಕ್ಕಾಳಾಗದ ದಂಪತಿಗಳಿಗೆ ತಮ್ಮದೇ ಮಕ್ಕಳನ್ನು ಪಡೆಯುವಲ್ಲಿ ಹಲವು ಆಯ್ಕೆಗಳನ್ನು ಒದಗಿಸುವ ಮೂಲಕ ಹಲವು ಕುಟುಂಬಗಳ ನೆಮ್ಮದಿಗೆ ಕಾರಣವಾಗಿವೇ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಎಸ್‌ ರವೀಂದ್ರನ್‌ ಅಭಿಪ್ರಾಯಪಟ್ಟರು.

Vijaya Karnataka 18 May 2019, 5:00 am
ಧಾರವಾಡ : ಆಧುನಿಕ ವೈಜ್ಞಾನಿಕ ಸಂಶೋಧನೆಗಳು ಮಕ್ಕಾಳಾಗದ ದಂಪತಿಗಳಿಗೆ ತಮ್ಮದೇ ಮಕ್ಕಳನ್ನು ಪಡೆಯುವಲ್ಲಿ ಹಲವು ಆಯ್ಕೆಗಳನ್ನು ಒದಗಿಸುವ ಮೂಲಕ ಹಲವು ಕುಟುಂಬಗಳ ನೆಮ್ಮದಿಗೆ ಕಾರಣವಾಗಿವೇ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಎಸ್‌ ರವೀಂದ್ರನ್‌ ಅಭಿಪ್ರಾಯಪಟ್ಟರು.
Vijaya Karnataka Web DRW-16RANGA05
ಧಾರವಾಡದ ಆಸ್ತಾ ಮಹಿಳಾ ಕೇಂದ್ರದಲ್ಲಿ ವಿಶ್ವ ತಾಯಂದಿರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಪ್ರನಾಳ ಶಿಶು ಕುರಿತ ಉಚಿತ ಶಿಬಿರವನ್ನು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಅಧ್ಯಕ್ಷ ಎಸ್‌.ರವೀಂದ್ರನ್‌ ಉದ್ಘಾಟಿಸಿದರು.


ನಗರದ ಆಸ್ತಾ ಮಹಿಳಾ ಕೇಂದ್ರದಲ್ಲಿ ಬುಧವಾರ ವಿಶ್ವ ತಾಯಂದಿರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಪ್ರನಾಳ ಶಿಶು ಕುರಿತ ಉಚಿತ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯರೂ ಆಧುನಿಕ ಸಂಶೋಧನೆಗಳೊಂದಿಗೆ ಹೆಜ್ಜೆ ಹಾಕುವುದು ಅನಿವಾರ್ಯವಾಗಿರುವುದರಿಂದ ಬಂಡವಾಳದ ಅವಶ್ಯಕತೆ ಅವರಿಗೆ ಹಿಂದೆಂದಿಗಿಂತ ಹೆಚ್ಚಿದೆ. ಪ್ರನಾಳ ಶಿಶು ಮತ್ತು ಬಂಜೆತನ ನಿವಾರಣೆಗೆ ಧಾರವಾಡದಲ್ಲೇ ಅವಕಾಶ ದೊರೆತಿರುವುದಿಂದ ಜನಸಾಮಾನ್ಯರಿಗೂ ಇದರಿಂದ ಅನುಕೂಲ ಆಗಲಿದೆ ಎಂದು ತಿಳಿಸಿದರು.

ಜ್ಯೋತಿ ಪ್ರಹ್ಲಾದ ಜೋಶಿ ಮಾತನಾಡಿ, ಮಕ್ಕಳಾಗದ ದಂಪತಿಗಳನ್ನು ಸಮಾಜ ನೋಡುವ ದೃಷ್ಟಿಕೊನವೇ ಭಿನ್ನವಾಗಿದ್ದು ವಿಶೇಷವಾಗಿ ಮಹಿಳೆ ಮಾನಸಿಕವಾಗಿ ತುಂಬಾ ತೊಳಲಾಡುತ್ತಾಳೆ. ಬಂಜೆತನ ನಿವಾರಣೆಗೆ ಸಂಬಂಧಿಸಿ ಧಾರವಾಡದಲ್ಲಿ ಆಸ್ಪತ್ರೆ ತೆರೆದ ಡಾ.ಸೌಭಾಗ್ಯ ಕುಲಕರ್ಣಿ ಕಾರ್ಯ ಶ್ಲಾಘನೀಯ ಎಂದರು.

ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಸೌಭಾಗ್ಯ ಕುಲಕರ್ಣಿ ಮಾತನಾಡಿ, ಆಧುನಿಕ ಜೀವನ ಶೈಲಿ ಪುರುಷ ಮತ್ತು ಮಹಿಳೆಯರೀರ್ವರನ್ನೂ ಬಂಜೆತನಕ್ಕೆ ದೂಡುತ್ತಿದ್ದು, ಸೂಕ್ತ ಔಷಧೋಪಚಾರ ಮತ್ತು ಜೀವನ ಶೈಲಿ ಬದಲಾವಣೆಯೊಂದಿಗೆ ಮಕ್ಕಳನ್ನು ಫಲಿಸುವಂತೆ ಮಾಡಬಹುದು. ಅದೂ ಸಾಧ್ಯವಾಗದಿದ್ದರೆ ಪ್ರನಾಳ ಶಿಶು ಪ್ರಯೋಗದ ಮೂಲಕ ಮೂಲಕ ಸಾಫಲ್ಯ ಕಾಣಬಹುದು. ಧಾರವಾಡದಲ್ಲಿ ಈ ಕುರಿತ ಸುಸಜ್ಜಿತ ಆಸ್ಪತ್ರೆ ಅವಶ್ಯಕತೆಯನ್ನು ಮನಗಂಡು ಹಾಗೂ ಜನಸಾಮಾನ್ಯರಿಗೂ ಇದರ ಪ್ರಯೋಜನ ದೊರೆಯಬೇಕೆಂಬ ಉದ್ದೇಶದಿಂದ ತಾವು ಆಸ್ಪತ್ರೆ ಆರಂಭಿಸಿದ್ದಾಗಿ ತಿಳಿಸಿದರು. ಆಸ್ಪತ್ರೆ ಮುಖ್ಯ ವೈದ್ಯೆ ಡಾ.ಕೋಮಲ ಕುಲಕರ್ಣಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಆಸ್ತಾ ಮಹಿಳಾ ಕೇಂದ್ರದ ಪರವಾಗಿ ಮಾಜಿ ಮೇಯರ್‌ ಪೂರ್ಣಾ ಪಾಟೀಲ, ಅಕ್ಕನ ಬಳಗದ ಅಧ್ಯಕ್ಷೆ ಮೀನಾಕ್ಷಿ ಕೋಟೂರು, ಬರಹಗಾರ್ತಿ ಮಾಲತಿ ಮುದಕವಿ, ರೋಟರಿ ಕ್ಲಬ್‌ ಉಪ ಗವರ್ನರ್‌ ಗೌರಿ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. 150ಕ್ಕೂ ಅಧಿಕ ದಂಪತಿಗಳು ಉಚಿತ ಶಿಬಿರದ ಪ್ರಯೋಜನ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ