ಧಾರವಾಡ : ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಮತ್ತು ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಕಂಡು ಬಂದಲ್ಲಿ ನಿಯಮಾನುಸಾರ ದಂಡ ವಿಧಿಸಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತನಿಖಾ ದಾಳಿ ಕೈಗೊಳ್ಳಲು ಮತ್ತು ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ದೀಪಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಶಾಲಾ, ಕಾಲೇಜು, ಆಸ್ಪತ್ರೆ, ಬಸ್ನಿಲ್ದಾಣ ಮತ್ತು ಸರ್ಕಾರಿ ಕಚೇರಿಗಳ ಆವರಣದಲ್ಲಿ ತಂಬಾಕು ಸೇವನೆ ನಿಷೇಧಿಸಲಾಗಿದ್ದು, ಈ ಕುರಿತ ಜಾಗೃತಿಗಾಗಿ ತಂಬಾಕು ಸೇವನೆಯಿಂದ ಆಗುವ ಹಾನಿ ಮತ್ತು ವಿಧಿಸುವ ದಂಡದ ಕುರಿತು ಮಾಹಿತಿ ಫಲಕ ಅಳವಡಿಸುವಂತೆ ಸೂಚಿಸಿದರು.
ಮೇ 31ರಂದು ಜಿಲ್ಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ವಿವಿಧ ರೀತಿಯ ಜನಜಾಗೃತಿ ಹಾಗೂ ಮಾಹಿತಿ ಶಿಬಿರದ ಚಟುವಟಿಕೆ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
2018-19 ನೇ ಸಾಲಿನಲ್ಲಿ ಪ್ರಕರಣ ದಾಖಲಿಸಿ 73,400ರೂ.ದಂಡ ವಿಧಿಸಲಾಗಿದೆ. 2019-20 ನೇ ಸಾಲಿನ ಎಪ್ರೀಲ್ ಮತ್ತು ಮೇ ತಿಂಗಳಲ್ಲಿ ಪ್ರಕರಣ ದಾಖಲಿಸಿ 21,780ರೂ. ದಂಡ ವಿಧಿಸಲಾಗಿದೆ. ರಾಜ್ಯ ತಂಬಾಕು ಉತ್ಪನ್ನ ಕಂಪನಿಗಳ ಪ್ರತಿನಿಧಿಗಳ ಜತೆ ವ್ಯವಹರಿಸುವ ಬಗ್ಗೆ ರಾಜ್ಯ ನಿಯಮಾವಳಿ ಕುರಿತು ವಿವರಿಸಿ. ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಸ್ಥಾಪಿಸಿ, ತಂಬಾಕಿನ ವ್ಯಸನದಿಂದ ಮುಕ್ತರಾಗಲು ಉಚಿತ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಡಾ. ಆರ್.ಎಂ.ದೊಡ್ಡಮನಿ ಪ್ರಾಸ್ತಾವಿಕ ಮಾತನಾಡಿದರು. ಡಾ. ಸುಜಾತಾ ವೀ. ಹಸವೀಮಠ, ಮಹಾಂತೇಶ ಇದ್ದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಶಾಲಾ, ಕಾಲೇಜು, ಆಸ್ಪತ್ರೆ, ಬಸ್ನಿಲ್ದಾಣ ಮತ್ತು ಸರ್ಕಾರಿ ಕಚೇರಿಗಳ ಆವರಣದಲ್ಲಿ ತಂಬಾಕು ಸೇವನೆ ನಿಷೇಧಿಸಲಾಗಿದ್ದು, ಈ ಕುರಿತ ಜಾಗೃತಿಗಾಗಿ ತಂಬಾಕು ಸೇವನೆಯಿಂದ ಆಗುವ ಹಾನಿ ಮತ್ತು ವಿಧಿಸುವ ದಂಡದ ಕುರಿತು ಮಾಹಿತಿ ಫಲಕ ಅಳವಡಿಸುವಂತೆ ಸೂಚಿಸಿದರು.
ಮೇ 31ರಂದು ಜಿಲ್ಲೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ವಿವಿಧ ರೀತಿಯ ಜನಜಾಗೃತಿ ಹಾಗೂ ಮಾಹಿತಿ ಶಿಬಿರದ ಚಟುವಟಿಕೆ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
2018-19 ನೇ ಸಾಲಿನಲ್ಲಿ ಪ್ರಕರಣ ದಾಖಲಿಸಿ 73,400ರೂ.ದಂಡ ವಿಧಿಸಲಾಗಿದೆ. 2019-20 ನೇ ಸಾಲಿನ ಎಪ್ರೀಲ್ ಮತ್ತು ಮೇ ತಿಂಗಳಲ್ಲಿ ಪ್ರಕರಣ ದಾಖಲಿಸಿ 21,780ರೂ. ದಂಡ ವಿಧಿಸಲಾಗಿದೆ. ರಾಜ್ಯ ತಂಬಾಕು ಉತ್ಪನ್ನ ಕಂಪನಿಗಳ ಪ್ರತಿನಿಧಿಗಳ ಜತೆ ವ್ಯವಹರಿಸುವ ಬಗ್ಗೆ ರಾಜ್ಯ ನಿಯಮಾವಳಿ ಕುರಿತು ವಿವರಿಸಿ. ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ಸ್ಥಾಪಿಸಿ, ತಂಬಾಕಿನ ವ್ಯಸನದಿಂದ ಮುಕ್ತರಾಗಲು ಉಚಿತ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಡಾ. ಆರ್.ಎಂ.ದೊಡ್ಡಮನಿ ಪ್ರಾಸ್ತಾವಿಕ ಮಾತನಾಡಿದರು. ಡಾ. ಸುಜಾತಾ ವೀ. ಹಸವೀಮಠ, ಮಹಾಂತೇಶ ಇದ್ದರು.