ಆ್ಯಪ್ನಗರ

ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಧಾರವಾಡ : ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವವನ್ನು ದೇಸಾಯಿಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಚರಿಸಲಾಯಿತು.

Vijaya Karnataka 18 Aug 2019, 5:00 am
ಧಾರವಾಡ : ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವವನ್ನು ದೇಸಾಯಿಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಚರಿಸಲಾಯಿತು.
Vijaya Karnataka Web worshipful jubilee of sri raghavendra swamis
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ


1830ರಲ್ಲಿ ಪವಾಡ ಸದೃಶ್ಯವಾಗಿ ಮೊರಬ ಮನೆತನದ ಆಚಾರ್ಯರಿಗೆ ದೊರೆಕಿದ್ದು ಬೃಂದಾವನಕ್ಕೆ ಅಂದಿನಿಂದ ಇಂದಿನವರೆಗೆ ವಿಶೇಷ ಭಕ್ತಿಯಿಂದ ಬೃಂದಾವನಕ್ಕೆ ಪೂಜೆ ಮಾಡುತ್ತಾ ಬರುಲಾಗುತ್ತಿದೆ.ಈ ಹಿನ್ನೆಲೆ ಮಠದಲ್ಲಿ ಅಷ್ಟೋತ್ತರ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ,ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಆ.17ರಂದು ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆಯ ನಿಮಿತ್ತ ಬೆಳಗ್ಗೆ ಅಷ್ಟೋತ್ತರ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಪಲ್ಲಕ್ಕಿ ಸೇವೆ ಹಾಗೂ ರಜತ ತೊಟ್ಟಿಲೋತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಂಗೀತ ಕಾರ್ಯಕ್ರಮ, ವಿಶೇಷ ಜ್ಞಾನಸತ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಆ.18 ರಂದು ಬೆಳಗ್ಗೆ ಅಷ್ಟೋತ್ತರ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ, ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ, ನಂತರ ರಥೋತ್ಸವ ನಡೆಯಲಿದೆ ಎಂದು ಎಸ್‌.ಎಚ್‌. ಕಾಂತನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ