ಆ್ಯಪ್ನಗರ

ಬಿಎಸ್‌ವೈ ಅವರದ್ದು ರೈತ ವಿರೋಧಿ ರಕ್ತ: ಮಧು ಬಂಗಾರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ರಕ್ತ ಸರಿಯಿಲ್ಲ. ರೈತ ವಿರೋಧಿ ರಕ್ತ ಅದು ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಗುಡುಗಿದ್ದಾರೆ.

ವಿಕ ಸುದ್ದಿಲೋಕ 21 Jul 2017, 5:03 pm
ಧಾರವಾಡ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ರಕ್ತ ಸರಿಯಿಲ್ಲ. ರೈತ ವಿರೋಧಿ ರಕ್ತ ಅದು ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಗುಡುಗಿದ್ದಾರೆ.
Vijaya Karnataka Web yeddyurappa is antifarmer madhu bangarappa
ಬಿಎಸ್‌ವೈ ಅವರದ್ದು ರೈತ ವಿರೋಧಿ ರಕ್ತ: ಮಧು ಬಂಗಾರಪ್ಪ


ನವಲಗುಂದದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ನಡೆದ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಎಸ್‌ವೈ ಓರ್ವ ಕಚಡಾ ಮುಖ್ಯಮಂತ್ರಿ. ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುವ ಹೇಳಿಕೆ ನೀಡಿದ್ದ ಅವರು ತಾಕತಿದ್ದರೆ ರೈತರ ಎದುರು ಬಂದು ಮಾತನಾಡಲಿ. ಕಣ್ಣೀರು ಸುರಿಸಿ ಅಧಿಕಾರಕ್ಕೆ ಬಂದಿರುವ ನಿಮಗೆ ರೈತರ ಕಣ್ಣೀರು ಕಾಣಿಸಿುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಗು ಹಿಡಿಯುವ ಬದಲು ಪ್ರಧಾನಿ ನರೇಂದ್ರ ಮೋದಿ ಮುಗು ಹಿಡಿಯಲಿ. ಇಲ್ಲಾ ಅಂದ್ರೆ ಜನ ನಿಮ್ಮ ಮನೆಗೆ ಬರುತ್ತಾರೆ ಎಂದು ಸೊರಬ ಶಾಸಕ ಮಧು ಬಂಗಾರಪ್ಪ ಅವರು ಬಿಎಸ್‍‌ವೈ ಅವರಿಗೆ ಎಚ್ಚರಿಕೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ