ಆ್ಯಪ್ನಗರ

ಯೋಗೀಶಗೌಡ ಕೊಲೆ ಪಕರಣ: ಮುಂದುವರೆದ ಸಿಬಿಐ ತನಿಖೆ

ಧಾರವಾಡ : ಜಿಲ್ಲಾಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆ ಮುಂದುವರಿಸಿರುವ ಸಿಬಿಐ ಪೊಲೀಸರು ಬುಧವಾರ ಉಪನಗರ ಠಾಣೆಯಲ್ಲಿನಾಲ್ವರನ್ನು ಕರೆಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Vijaya Karnataka 27 Feb 2020, 5:00 am
ಧಾರವಾಡ : ಜಿಲ್ಲಾಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆ ಮುಂದುವರಿಸಿರುವ ಸಿಬಿಐ ಪೊಲೀಸರು ಬುಧವಾರ ಉಪನಗರ ಠಾಣೆಯಲ್ಲಿನಾಲ್ವರನ್ನು ಕರೆಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Vijaya Karnataka Web yogishagowda murder case continued cbi investigation
ಯೋಗೀಶಗೌಡ ಕೊಲೆ ಪಕರಣ: ಮುಂದುವರೆದ ಸಿಬಿಐ ತನಿಖೆ


ಸುಪ್ರೀಂಕೋರ್ಟ್‌ ತಡೆಯಾಜ್ಞೆ ತೆರೆವುಗೊಳಿಸಿದ್ದರಿಂದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆನ್ನು ಸಿಬಿಐ ತಂಡ ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಯಕ ಕಟಗಿ, ಸ್ಯಾಂಡಿ ಅಲಿಯಾಸ ಸಂದೀಪ, ಮುದುಕಪ್ಪ, ಕೀರ್ತಿ ಎಂಬುವರನ್ನು ಬುಧವಾರ ಠಾಣೆಗೆ ಕರೆಸಿಕೊಂಡು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ಲದೆ ನಗರದ ಕೆಲ ಸ್ಥಳಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ. ಸಿಬಿಐನ ನಾಲ್ವರ ತಂಡ ಗುರುವಾರವೂ ಪ್ರಕರಣದ ಕುರಿತು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ