ಆ್ಯಪ್ನಗರ

ಕಿರಿಯ ವಕೀಲರಿಗೆ ತರಬೇತಿ ಅವಶ್ಯ

ಧಾರವಾಡ : ನಗರದ ಜಿಲ್ಲಾ ವಕೀಲರ ಸಂಘದ ಸಭಾಭವನದಲ್ಲಿ ಸೋಮವಾರ ವಕೀಲರ ದಿನಾಚರಣೆ ಆಚರಿಸಲಾಯಿತು. ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ, ದೇಶಕ್ಕೆ ಸ್ವಾತಂತ್ರ ತಂದು ಕೊಡುವುದರಲ್ಲಿ ಹಾಗೂ ದೇಶದ ಆಡಳಿತ ವ್ಯವಸ್ಥೆಯನ್ನು ಸಂವಿಧಾನದ ತಳಹದಿಯೊಂದಿಗೆ ಮುಂಚೂಣಿಯಲ್ಲಿ ಇಡುವುದು ವಕೀಲರ ಪಾತ್ರ ದೊಡ್ಡದು. ಹಿರಿಯ ವಕೀಲರು ಕಿರಿಯ ವಕೀಲರು

Vijaya Karnataka 5 Dec 2018, 5:00 am
ಧಾರವಾಡ : ನಗರದ ಜಿಲ್ಲಾ ವಕೀಲರ ಸಂಘದ ಸಭಾಭವನದಲ್ಲಿ ಸೋಮವಾರ ವಕೀಲರ ದಿನಾಚರಣೆ ಆಚರಿಸಲಾಯಿತು. ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ, ದೇಶಕ್ಕೆ ಸ್ವಾತಂತ್ರ ತಂದು ಕೊಡುವುದರಲ್ಲಿ ಹಾಗೂ ದೇಶದ ಆಡಳಿತ ವ್ಯವಸ್ಥೆಯನ್ನು ಸಂವಿಧಾನದ ತಳಹದಿಯೊಂದಿಗೆ ಮುಂಚೂಣಿಯಲ್ಲಿ ಇಡುವುದು ವಕೀಲರ ಪಾತ್ರ ದೊಡ್ಡದು. ಹಿರಿಯ ವಕೀಲರು ಕಿರಿಯ ವಕೀಲರು ಆರ್ಥಿಕವಾಗಿ ಸಬಲರಾಗಲು ಚಿಂತನೆ ಮಾಡಬೇಕು. ಕಿರಿಯ ವಕೀಲರಿಗೆ ಮೇಲಿಂದ ಮೇಲೆ ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಅವರನ್ನು ನ್ಯಾಯಾಧೀಶರನ್ನಾಗಿ ಮಾಡಬೇಕು ಎಂದರು.
Vijaya Karnataka Web DRW-04MAILAR04
ಧಾರವಾಡ ವಕೀಲರ ಸಂಘದ ಸಭಾಭವನದಲ್ಲಿ ನಡೆದ ವಕೀಲರ ದಿನಾಚರಣೆ ಕಾರ‍್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಮಾತನಾಡಿದರು.


ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಸದಸ್ಯರಾದ ವಿ.ಡಿ.ಕಾಮರಡ್ಡಿ ಹಾಗೂ ಕೆ.ಬಿ.ನಾವಲಗಿಮಠ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಆರ್‌.ಯು.ಬೆಳ್ಳಕ್ಕಿ ಅಧ್ಯಕ್ಷತೆ ವಹಿಸಿದ್ದರು. ಸಂಗಮೇಶ ಎಸ್‌. ಬನ್ನೂರ ನಿರೂಪಿಸಿದರು. ಸಿ.ಎಸ್‌.ಪೊಲೀಸ್‌ಪಾಟೀಲ ಸ್ವಾಗತಿಸಿದರು. ಕಲ್ಮೇಶ ನಿಂಗಣ್ಣವರ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ