ಧಾರವಾಡ: ಬಲಿಷ್ಠ ಭಾರತ ಕಟ್ಟುವಲ್ಲಿಯುವ ಸಮುದಾಯದ ಪಾತ್ರ ಬಹುಮುಖ್ಯ. ದೇಶದ ಅಭಿವೃದ್ಧಿ ಅವರ ಮಾನಸಿಕ ಹಾಗೂ ದೈಹಿಕ ಸದೃಢತೆಯನ್ನು ಅವಲಂಬಿಸಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಬೆಳವಣಿಗೆ ಕಲ್ಪಿಸಲು ಪಾಲಕರು ತಪ್ಪದೆ ಜಂತು ನಿವಾರಕ ಮಾತ್ರೆ ನೀಡಬೇಕು. ಇದರಿಂದ ಸರಿಯಾದ ಪಚನವಾಗಿ ದೇಹಕ್ಕೆ ಪೌಷ್ಠಿಕಾಂಶ ದೊರಕುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ನಗರದ ಕೆ.ಇ. ಬೋರ್ಡ್ ಸಂಸ್ಥೆಯ ಕರ್ನಾಟಕ ಹೈಸ್ಕೂಲ್ನಲ್ಲಿಸೋಮವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಬರಿಗಾಲಿನ ನಡಿಗೆ, ಮಣ್ಣಿನಲ್ಲಿಆಟ, ಅಸುರಕ್ಷಿತವಾಗಿ ಆಹಾರ ಸೇವನೆ ಮತ್ತು ನೀರು ಕುಡಿಯುವುದು, ಅನೈರ್ಮಲ್ಯತೆ ಇತ್ಯಾದಿಗಳಿಂದ ಮಕ್ಕಳಲ್ಲಿಜಂತುಹುಳು ಉತ್ಪಾದನೆ ಆಗುತ್ತದೆ. ಇದರಿಂದಾಗಿ ಮಕ್ಕಳು ಸೇವಿಸಿದ ಆಹಾರ ಸರಿಯಾಗಿ ಪಚನವಾಗದೆ ಬೆಳವಣಿಗೆ ಕುಂಠಿತವಾಗುತ್ತದೆ. ಮಕ್ಕಳಲ್ಲಿಅಶಕ್ತತೆ, ಕುಬ್ಜತೆ, ಬಡಕಲು ದೇಹ ಹೊಂದುವುದು ಉಂಟಾಗುತ್ತದೆ. ಜಂತುಹುಳು ನಿವಾರಕ ಮಾತ್ರೆ ತಿನ್ನಿಸುವದರಿಂದ ಈ ಸಮಸ್ಯೆ ಪರಿಹರಿಸಿ, ಸಮಪ್ರಮಾಣದಲ್ಲಿಮಕ್ಕಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಹೊಂದಬಹುದು ಎಂದು ಹೇಳಿದರು.
ಜಿಲ್ಲಾಪಂಚಾಯತ್ ಸಿಇಒ ಡಾ. ಬಿ.ಸಿ. ಸತೀಶ ಮಾತನಾಡಿ, ಜಂತುಹುಳು ನಿವಾರಣೆ ಮಾತ್ರೆಯನ್ನು ವರ್ಷದಲ್ಲಿಎರಡು ಬಾರಿ ಎಲ್ಲಾಮಕ್ಕಳಿಗೆ ಜಂತುಹುಳು ನಿವಾರಣೆ ಕಾರ್ಯಕ್ರಮದ ಮೂಲಕ ಉಚಿತವಾಗಿ ನೀಡಲಾಗುತ್ತದೆ. ಪಾಲಕರು ಹಾಗೂ ಶಿಕ್ಷಕರು ಈ ಮಾತ್ರೆಗಳನ್ನು ಪ್ರತಿ ಮಗು ತಪ್ಪದೇ ಪಡೆಯುವಂತೆ ಜಾಗೃತಿ ವಹಿಸಬೇಕು. ಶಾಲಾ ಮಕ್ಕಳು ತಮ್ಮ ಮನೆಯಲ್ಲಿರುವ ಹಾಗೂ ನೆರೆಹೊರೆಯ ಮನೆಗಳಲ್ಲಿರುವ ಮಕ್ಕಳು, ಹದಿಹರೆಯದವರು ಈ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಬೇಕೆಂದು ತಿಳಿಸಿದರು.
ಕೆ.ಇ. ಬೋರ್ಡ್ ಸಂಸ್ಥೆಯ ಕಾರ್ಯಾಧ್ಯಕ್ಷ ಅರುಣ ನಾಡಗೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕಾರ್ಯಕ್ರಮದಲ್ಲಿಕರ್ನಾಟಕ ಪ್ರೌಢ ಶಾಲೆಯ ಶತಮಾನೋತ್ಸವದ ಸವಿನೆನಪಿಗಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಜಿಪಂ ಸಿಇಒ ಡಾ.ಬಿ.ಸಿ.ಸತೀಶ ಅವರನ್ನು ಕೆ.ಇ.ಬೋರ್ಡ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ್ ನರಹಟ್ಟಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಯಶವಂತ ಮದೀನಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ಕುಮಾರ್ ಹಂಚಾಟೆ, ಜಿಲ್ಲಾಆರ್.ಸಿ.ಹೆಚ್ ಅಧಿಕಾರಿ ಡಾ.ಎಸ್.ಎಮ್ ಹೊನಕೇರಿ, ಜಿಲ್ಲಾಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಲಾ ನಿಂಬಣ್ಣವರ, ಜಿಲ್ಲಾಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಶಶಿ ಪಾಟೀಲ್, ಜಿಲ್ಲಾಸಮೀಕ್ಷಣಾ ಅಧಿಕಾರಿ ಡಾ. ಸುಜಾತಾ ಹಸವಿಮಠ, ಡಾ.ಶೋಭಾ ಮೂಲಿಮನಿ, ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಕವನ್ ದೇಶಪಾಂಡೆ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.
ಪ್ರೌಢಶಾಲೆಯ ಪ್ರಾಂಶುಪಾಲ ಎ.ಆರ್.ಹದಲಿ ಸ್ವಾಗತಿಸಿದರು. ಶಾಲಾ ಸುಧಾರಣ ಸಮಿತಿ ಅಧ್ಯಕ್ಷ ಶ್ರೀಕಾಂತ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಸಿ. ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ವಂದಿಸಿದರು.
ನಗರದ ಕೆ.ಇ. ಬೋರ್ಡ್ ಸಂಸ್ಥೆಯ ಕರ್ನಾಟಕ ಹೈಸ್ಕೂಲ್ನಲ್ಲಿಸೋಮವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಬರಿಗಾಲಿನ ನಡಿಗೆ, ಮಣ್ಣಿನಲ್ಲಿಆಟ, ಅಸುರಕ್ಷಿತವಾಗಿ ಆಹಾರ ಸೇವನೆ ಮತ್ತು ನೀರು ಕುಡಿಯುವುದು, ಅನೈರ್ಮಲ್ಯತೆ ಇತ್ಯಾದಿಗಳಿಂದ ಮಕ್ಕಳಲ್ಲಿಜಂತುಹುಳು ಉತ್ಪಾದನೆ ಆಗುತ್ತದೆ. ಇದರಿಂದಾಗಿ ಮಕ್ಕಳು ಸೇವಿಸಿದ ಆಹಾರ ಸರಿಯಾಗಿ ಪಚನವಾಗದೆ ಬೆಳವಣಿಗೆ ಕುಂಠಿತವಾಗುತ್ತದೆ. ಮಕ್ಕಳಲ್ಲಿಅಶಕ್ತತೆ, ಕುಬ್ಜತೆ, ಬಡಕಲು ದೇಹ ಹೊಂದುವುದು ಉಂಟಾಗುತ್ತದೆ. ಜಂತುಹುಳು ನಿವಾರಕ ಮಾತ್ರೆ ತಿನ್ನಿಸುವದರಿಂದ ಈ ಸಮಸ್ಯೆ ಪರಿಹರಿಸಿ, ಸಮಪ್ರಮಾಣದಲ್ಲಿಮಕ್ಕಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಹೊಂದಬಹುದು ಎಂದು ಹೇಳಿದರು.
ಜಿಲ್ಲಾಪಂಚಾಯತ್ ಸಿಇಒ ಡಾ. ಬಿ.ಸಿ. ಸತೀಶ ಮಾತನಾಡಿ, ಜಂತುಹುಳು ನಿವಾರಣೆ ಮಾತ್ರೆಯನ್ನು ವರ್ಷದಲ್ಲಿಎರಡು ಬಾರಿ ಎಲ್ಲಾಮಕ್ಕಳಿಗೆ ಜಂತುಹುಳು ನಿವಾರಣೆ ಕಾರ್ಯಕ್ರಮದ ಮೂಲಕ ಉಚಿತವಾಗಿ ನೀಡಲಾಗುತ್ತದೆ. ಪಾಲಕರು ಹಾಗೂ ಶಿಕ್ಷಕರು ಈ ಮಾತ್ರೆಗಳನ್ನು ಪ್ರತಿ ಮಗು ತಪ್ಪದೇ ಪಡೆಯುವಂತೆ ಜಾಗೃತಿ ವಹಿಸಬೇಕು. ಶಾಲಾ ಮಕ್ಕಳು ತಮ್ಮ ಮನೆಯಲ್ಲಿರುವ ಹಾಗೂ ನೆರೆಹೊರೆಯ ಮನೆಗಳಲ್ಲಿರುವ ಮಕ್ಕಳು, ಹದಿಹರೆಯದವರು ಈ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಬೇಕೆಂದು ತಿಳಿಸಿದರು.
ಕೆ.ಇ. ಬೋರ್ಡ್ ಸಂಸ್ಥೆಯ ಕಾರ್ಯಾಧ್ಯಕ್ಷ ಅರುಣ ನಾಡಗೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕಾರ್ಯಕ್ರಮದಲ್ಲಿಕರ್ನಾಟಕ ಪ್ರೌಢ ಶಾಲೆಯ ಶತಮಾನೋತ್ಸವದ ಸವಿನೆನಪಿಗಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಜಿಪಂ ಸಿಇಒ ಡಾ.ಬಿ.ಸಿ.ಸತೀಶ ಅವರನ್ನು ಕೆ.ಇ.ಬೋರ್ಡ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕ ಡಾ.ಅಪ್ಪಾಸಾಹೇಬ್ ನರಹಟ್ಟಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಯಶವಂತ ಮದೀನಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ಕುಮಾರ್ ಹಂಚಾಟೆ, ಜಿಲ್ಲಾಆರ್.ಸಿ.ಹೆಚ್ ಅಧಿಕಾರಿ ಡಾ.ಎಸ್.ಎಮ್ ಹೊನಕೇರಿ, ಜಿಲ್ಲಾಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಲಾ ನಿಂಬಣ್ಣವರ, ಜಿಲ್ಲಾಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಶಶಿ ಪಾಟೀಲ್, ಜಿಲ್ಲಾಸಮೀಕ್ಷಣಾ ಅಧಿಕಾರಿ ಡಾ. ಸುಜಾತಾ ಹಸವಿಮಠ, ಡಾ.ಶೋಭಾ ಮೂಲಿಮನಿ, ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಕವನ್ ದೇಶಪಾಂಡೆ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.
ಪ್ರೌಢಶಾಲೆಯ ಪ್ರಾಂಶುಪಾಲ ಎ.ಆರ್.ಹದಲಿ ಸ್ವಾಗತಿಸಿದರು. ಶಾಲಾ ಸುಧಾರಣ ಸಮಿತಿ ಅಧ್ಯಕ್ಷ ಶ್ರೀಕಾಂತ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಸಿ. ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ವಂದಿಸಿದರು.