ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೂವರ ಬಾಲಕಿಯರ ಮೃತಪಟ್ಟಿರುವ ಘಟನೆ ನಡೆದಿದೆ. ಅತ್ತಿಕಟ್ಟಿ ತಾಂಡಾದ ಸುನಿತಾ ಲಮಾಣಿ (13) ಅಂಕಿತಾ ಲಮಾಣಿ (10) ಹಾಗೂ ಡೋಣಿ ತಾಂಡಾದ ಸುನಿತಾ (11) ಮೃತ ಬಾಲಕಿಯರಾಗಿದ್ದು, ಕುರಿ ಮರಿ ಮೇಯಿಸಲು ಜಮೀನಿಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನೆಯ ಹಿನ್ನೆಲೆ
ಅತ್ತಿಕಟ್ಟಿ ತಾಂಡಾದ ಲಕ್ಷ್ಮಣ ಲಮಾಣಿ ಗೋವಾದಲ್ಲಿ ಕೆಲಸ ಮಾಡ್ತಿದ್ರು. ತಮ್ಮ ಗೋವಿಂದನ ಮದ್ವೆ ಹಿನ್ನೆಲೆ ಕುಟುಂಬ ಸಮೇತ ತಾಂಡಾಕ್ಕೆ ಬಂದಿದ್ರು. ಮದ್ವೆ ಮನೆಯಲ್ಲಿ 15 ರಿಂದ 20 ಮಕ್ಕಳ ತಂಡವೇ ಸೇರಿತ್ತು. ಮಕ್ಕಳು ಗುಂಪು ಕಟ್ಕೊಂಡು ಆಟಾ ಆಡುತ್ತಾ ಕುರಿಗಳ ಜೊತೆಗೆ ಹೋಲಕ್ಕೆ ಹೋಗ್ಬೇಕು ಅಂತಾ ನಿರ್ಧರಿಸಿದ್ದರು. ಮಧ್ಯಾಹ್ನದ ಬಿರು ಬಿಸಿಲಿಗೆ ಆಟವಾಡುತ್ತಾ ಮೂವರು ಬಾಲಕಿಯರು ಕೃಷಿ ಹೊಂಡಕ್ಕೆ ತೆರಳಿ ಬಾಯಾರಿಕೆಯಾಗಿ ನೀರು ಕುಡಿದು ಕೈಕಾಲು ಮುಖ ತೊಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಆಯತಪ್ಪಿ ಹೊಂಡದಲ್ಲಿ ಬಿದ್ದಿರುವ ಸಂಶಯ ವ್ಯಕ್ತವಾಗಿದೆ.
ವಿಷ್ಯ ತಿಳಿದು ಸ್ಥಳಕ್ಕೆ ಆಗಮಿಸಿದ ಊರಿನ ಜನ ಮಕ್ಕಳ ಶವ ಮೇಲೆತ್ತಿದ್ದಾರೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಭೇಟಿ ನೀಡುವ ಹೊತ್ತಲ್ಲೇ ಇಬ್ಬರ ಶವ ಆಚೆ ತೆಗೆಯಲಾಗಿತ್ತು. ಸ್ಥಳೀಯರ ಸಹಾಯದಿಂದ ಸಂಜೆ ಸುನಿತಾ ಅನ್ನೋ ಬಾಲಕಿಯ ಶವವನ್ನೂ ಮೇಲೆ ತೆಗೆಯಲಾಗಿದೆ. ಸದ್ಯ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಕೃಷಿ ಹೊಂಡ ಬಸವರಾಜ್ ಅನ್ನೋ ವ್ಯಕ್ತಿಗೆ ಸೇರಿದ್ದು ಕೃಷಿ ಹೊಂಡಕ್ಕೆ ತಡೆಗೋಡಿ ನಿರ್ಮಿಸಿದ್ದರೆ ಮಕ್ಕಳು ಉಳಿಯುತ್ತಿದ್ದರು. ಅಗತ್ಯಕ್ಕಿಂತ ಹೆಚ್ಚಿಗೆ ಆಳದಲ್ಲಿ ಕೃಷಿ ಹೊಂಡ ತೋಡಲಾಗಿದೆ. ಆದ್ರೆ, ಸುರಕ್ಷತೆ ಕ್ರಮಗಳನ್ನ ಕೈಗೊಂಡಿಲ್ಲ. ಹೀಗಾಗಿ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಆಶಪ್ಪ ಪೂಜಾರಿ, ಪೊಲೀಸ್ ಇನ್ಸಪೆಕ್ಟರ್ ಸುನಿಲ್ ಸವದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.
ಘಟನೆಯ ಹಿನ್ನೆಲೆ
ಅತ್ತಿಕಟ್ಟಿ ತಾಂಡಾದ ಲಕ್ಷ್ಮಣ ಲಮಾಣಿ ಗೋವಾದಲ್ಲಿ ಕೆಲಸ ಮಾಡ್ತಿದ್ರು. ತಮ್ಮ ಗೋವಿಂದನ ಮದ್ವೆ ಹಿನ್ನೆಲೆ ಕುಟುಂಬ ಸಮೇತ ತಾಂಡಾಕ್ಕೆ ಬಂದಿದ್ರು. ಮದ್ವೆ ಮನೆಯಲ್ಲಿ 15 ರಿಂದ 20 ಮಕ್ಕಳ ತಂಡವೇ ಸೇರಿತ್ತು. ಮಕ್ಕಳು ಗುಂಪು ಕಟ್ಕೊಂಡು ಆಟಾ ಆಡುತ್ತಾ ಕುರಿಗಳ ಜೊತೆಗೆ ಹೋಲಕ್ಕೆ ಹೋಗ್ಬೇಕು ಅಂತಾ ನಿರ್ಧರಿಸಿದ್ದರು. ಮಧ್ಯಾಹ್ನದ ಬಿರು ಬಿಸಿಲಿಗೆ ಆಟವಾಡುತ್ತಾ ಮೂವರು ಬಾಲಕಿಯರು ಕೃಷಿ ಹೊಂಡಕ್ಕೆ ತೆರಳಿ ಬಾಯಾರಿಕೆಯಾಗಿ ನೀರು ಕುಡಿದು ಕೈಕಾಲು ಮುಖ ತೊಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಆಯತಪ್ಪಿ ಹೊಂಡದಲ್ಲಿ ಬಿದ್ದಿರುವ ಸಂಶಯ ವ್ಯಕ್ತವಾಗಿದೆ.
ವಿಷ್ಯ ತಿಳಿದು ಸ್ಥಳಕ್ಕೆ ಆಗಮಿಸಿದ ಊರಿನ ಜನ ಮಕ್ಕಳ ಶವ ಮೇಲೆತ್ತಿದ್ದಾರೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಭೇಟಿ ನೀಡುವ ಹೊತ್ತಲ್ಲೇ ಇಬ್ಬರ ಶವ ಆಚೆ ತೆಗೆಯಲಾಗಿತ್ತು. ಸ್ಥಳೀಯರ ಸಹಾಯದಿಂದ ಸಂಜೆ ಸುನಿತಾ ಅನ್ನೋ ಬಾಲಕಿಯ ಶವವನ್ನೂ ಮೇಲೆ ತೆಗೆಯಲಾಗಿದೆ. ಸದ್ಯ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಕೃಷಿ ಹೊಂಡ ಬಸವರಾಜ್ ಅನ್ನೋ ವ್ಯಕ್ತಿಗೆ ಸೇರಿದ್ದು ಕೃಷಿ ಹೊಂಡಕ್ಕೆ ತಡೆಗೋಡಿ ನಿರ್ಮಿಸಿದ್ದರೆ ಮಕ್ಕಳು ಉಳಿಯುತ್ತಿದ್ದರು. ಅಗತ್ಯಕ್ಕಿಂತ ಹೆಚ್ಚಿಗೆ ಆಳದಲ್ಲಿ ಕೃಷಿ ಹೊಂಡ ತೋಡಲಾಗಿದೆ. ಆದ್ರೆ, ಸುರಕ್ಷತೆ ಕ್ರಮಗಳನ್ನ ಕೈಗೊಂಡಿಲ್ಲ. ಹೀಗಾಗಿ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಆಶಪ್ಪ ಪೂಜಾರಿ, ಪೊಲೀಸ್ ಇನ್ಸಪೆಕ್ಟರ್ ಸುನಿಲ್ ಸವದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.