ಆ್ಯಪ್ನಗರ

ಕಲುಷಿತ ನೀರು ಸೇವಿಸಿ 9 ಮಂದಿ ಅಸ್ವಸ್ಥ

ಲಕ್ಷ್ಮೇಶ್ವರ : ಸಮೀಪದ ಕೊಕ್ಕರಗುಂದಿ ಗ್ರಾಮದಲ್ಲಿ ಮಂಗಳವಾರ ತೀವ್ರ ವಾಂತಿ-ಭೇದಿಯಿಂದ 9 ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಬೆಳಗ್ಗೆ ಅನೇಕರಿಗೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಇವರೆನ್ನೆಲ್ಲ ತಕ್ಷಣ ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

Vijaya Karnataka 22 May 2019, 5:00 am
ಲಕ್ಷ್ಮೇಶ್ವರ : ಸಮೀಪದ ಕೊಕ್ಕರಗುಂದಿ ಗ್ರಾಮದಲ್ಲಿ ಮಂಗಳವಾರ ತೀವ್ರ ವಾಂತಿ-ಭೇದಿಯಿಂದ 9 ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.
Vijaya Karnataka Web GDG-21LXR02
ವಾಂತಿ-ಭೇದಿಯಿಂದ ಬಳಲಿ ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ.

ಬೆಳಗ್ಗೆ ಅನೇಕರಿಗೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಇವರೆನ್ನೆಲ್ಲ ತಕ್ಷಣ ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಪಂಚಾಯಿತಿಯವರು ಕೊಳವೆ ಬಾವಿಯಿಂದ ಕಲುಷಿತ ನೀರು ಪೂರೈಕೆ ಮಾಡಿದ್ದರಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅನ್ನಪೂರ್ಣ ಪಾಟೀಲ, ಚೈತ್ರಾ ಪಾಟೀಲ, ನೀಲವ್ವ ಪಾಟೀಲ, ಶಶಿಕಲಾ ಪಾಟೀಲ, ಶೇಖವ್ವ ಪಾಟೀಲ, ತಿಪ್ಪನಗೌಡ ಪಾಟೀಲ, ಅಂದಲಗೌಡ ಪಾಟೀಲ, ಶಾಂತವ್ವ ಪಾಟೀಲ, ಶ್ರೀನಿವಾಸಗೌಡ ಪಾಟೀಲ ಎಂಬುವರೇ ಅಸ್ವಸ್ಥಗೊಂಡವರು.

ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಆರ್‌.ವೈ.ಗುರಿಕಾರ, ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕದ ನೀರು ಹಾಗೂ ಕಾಯಿಸಿ ಆರಿಸಿದ ನೀರನ್ನು ಕುಡಿಯುವಂತೆ ಮನವಿ ಮಾಡಿದರು. ತಾಲೂಕಾ ವೈದ್ಯಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಈ ಘಟನೆ ನೀರಿನಿಂದ ಆಗಿದೆಯೋ ಅಥವಾ ಬೇರೆ ಯಾವುದಾದರೂ ಕಾರಣ ಇದೆಯೋ ಎಂಬ ಬಗ್ಗೆ ಪರೀಕ್ಷಿಸಲಿದ್ದಾರೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ