ಆ್ಯಪ್ನಗರ

ಮಾದಕ ವ್ಯಸನಮುಕ್ತ ಸಮಾಜಕ್ಕೆ ಕ್ರಮ ಅಗತ್ಯ

ಗದಗ : ಶೋಕಿಗಾಗಿ ಯುವ ಜನತೆ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇದರಿಂದ ಸಾಮಾಜಿಕ, ಆರ್ಥಿಕ, ದೈಹಿಕ ಸಮಸ್ಯೆ ತಲೆದೋರುತ್ತಿವೆ. ಇದಕ್ಕಾಗಿ ಕಾನೂನಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪಾಲಕರು ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಮಾದಕ ವ್ಯಸನ ತಡೆಗಟ್ಟಿ ಸಮಾಜವನ್ನು ಸದೃಢಗೊಳಿಸಬೇಕು ಎಂದು ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಹೇಳಿದರು.

Vijaya Karnataka 27 Jun 2019, 5:00 am
ಗದಗ : ಶೋಕಿಗಾಗಿ ಯುವ ಜನತೆ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇದರಿಂದ ಸಾಮಾಜಿಕ, ಆರ್ಥಿಕ, ದೈಹಿಕ ಸಮಸ್ಯೆ ತಲೆದೋರುತ್ತಿವೆ. ಇದಕ್ಕಾಗಿ ಕಾನೂನಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪಾಲಕರು ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಮಾದಕ ವ್ಯಸನ ತಡೆಗಟ್ಟಿ ಸಮಾಜವನ್ನು ಸದೃಢಗೊಳಿಸಬೇಕು ಎಂದು ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಹೇಳಿದರು.
Vijaya Karnataka Web GDG-26SALIM3
ಗದಗನಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ -2019 ಕಾರ್ಯಕ್ರಮವನ್ನು ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಉದ್ಘಾಟಿಸಿದರು.


ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ ವಿಭಾಗ, ಗದಗ ವೈದ್ಯಕೀಯ ಮಹಾವಿದ್ಯಾಲಯ, ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ಕಾರಾಗೃಹ ಹಾಗೂ ಸರ್ಕಾರೇತರ ಸಂಸ್ಥೆಗಳು, ತಾಲೂಕು ಆರೋಗ್ಯ ಅಧಿಕಾರಿಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ -2019 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಸ್‌.ಜಿ. ಸಲಗರೆ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತಿದ್ದಾರೆ. ಇದರಿಂದ ಕುಟುಂಬ, ಸಮಾಜ ಹಾಗೂ ದೇಶಕ್ಕೆ ಬಹಳ ಹಾನಿಯಾಗುತ್ತಿದೆ. ಆದ್ದರಿಂದ ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿರುಪಾಕ್ಷ ರಡ್ಡಿ ಮಾದಿನೂರ ಮಾತನಾಡಿ, ವಿಶ್ವದಲ್ಲಿ ಯುವಜನತೆ ಹೆಚ್ಚು ಹೆಚ್ಚು ಮಾದಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಕಾರಣ ಮಾದಕ ವಸ್ತುಗಳ ಮೂಲವನ್ನು ಸರಕಾರ ಅಲ್ಲಿಯೇ ಕೊನೆಗೊಳಿಸಬೇಕು ಹಾಗೂ ಯುವಜನತೆ ಇದಕ್ಕೆ ಮಾರುಹೋಗದೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಡಾ. ಸೋಮಶೇಖರ ಬಿಜ್ಜಳ ಉಪನ್ಯಾಸ ನೀಡಿದರು. ಕೆವಿಎಸ್‌ಆರ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಬಿ.ಎಫ್‌. ದಂಡಿನ ಅಧ್ಯಕ್ಷತೆ ವಹಿಸಿದ್ದರು. ಡಾ.ಎಸ್‌.ಎಸ್‌. ನೀಲಗುಂದ, ಡಾ. ರೇಣುಕಾ ಕೊರವರ, ಡಾ. ವೈಶಾಲಿ ಹೆಗಡೆ, ಎಚ್‌. ಸುರೇಶ, ಬಸವರಾಜ ಲಾಲಗಟ್ಟಿ, ಪ್ರಿಯಾಂಕಾ ಹಂಚಿನಾಳ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ