ಆ್ಯಪ್ನಗರ

ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಿ

ನರಗುಂದ : ರೈತರ ಮನೆ ಬಾಗಿಲಲ್ಲಿಕೃಷಿ ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ಮಾಡಿಕೊಡುವುದಾಗಿ ರೈತರನ್ನು ನಂಬಿಸಿ ಈಗಿರುವ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ರೈತರನ್ನು ಗುಲಾಮರನ್ನಾಗಿ ಮಾಡುವ ಕಾಯ್ದೆ ಕೈ ಬಿಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪಿಎಂ,ಸಿಎಂಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

Vijaya Karnataka 15 May 2020, 5:00 am
ನರಗುಂದ : ರೈತರ ಮನೆ ಬಾಗಿಲಲ್ಲಿಕೃಷಿ ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ಮಾಡಿಕೊಡುವುದಾಗಿ ರೈತರನ್ನು ನಂಬಿಸಿ ಈಗಿರುವ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ರೈತರನ್ನು ಗುಲಾಮರನ್ನಾಗಿ ಮಾಡುವ ಕಾಯ್ದೆ ಕೈ ಬಿಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪಿಎಂ,ಸಿಎಂಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
Vijaya Karnataka Web abandonment of apmc act amendment
ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಿ


ಇಲ್ಲಿನ ತಹಸೀಲ್ದಾರ ಮಹೇಂದ್ರ ಅವರಿಗೆ ಮನವಿ ಸಲ್ಲಿಸಿದ ರೈತರು ಕೋವಿಡ್‌19 ಮಹಾಮಾರಿಯಿಂದ ಕೃಷಿ ಉತ್ತನ್ನಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಬಿತ್ತಿದ ಬೆಳೆಗೆ ಯೋಗ್ಯ ಬೆಲೆ ಸಿಗುತ್ತಿಲ್ಲಎಂದು ಗೋಳಾಡುತ್ತಿರುವ ಸಂದರ್ಭದಲ್ಲಿರೈತರ ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಹಿಸುವುದಿಲ್ಲಎಂದು ರೈತ ಸಂಘದ ಅಧ್ಯಕ್ಷ ವಿಠಲ ಜಾಧವ ಎಚ್ಚರಿಸಿದರು.

ಮೆಕ್ಕೆ ಜೋಳ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಕೆಎಂಎಫ್‌ ಖರೀದಿಸಲು ಆದೇಶ ಹೊರಡಿಸಿದೆ. ಆದರೆ ಯಾವ ಮಾನದಂಡದ ಮೇಲೆ ಖರೀದಿ ಮಾಡಬೇಕು ಎಂಬುದು ರಾಜ್ಯ ಸರಕಾರ ಸೂಚನೆ ನೀಡಿಲ್ಲ. ಖರೀದಿ ಮೊದಲೆ ರೈತರ ನೋಂದಣಿ ಕಾರ್ಯ ಈವರೆಗೆ ಆರಂಭಿಸದಿರುವುದು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೂಡಲೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಸೂಚಿಸಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ಇಲ್ಲದೆ ಹೋದರೆ ರಾಜ್ಯದ್ಯಂತ ರಾಜ್ಯ ರೈತ ಸಂಘದಿಂದ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಡಿ.ಎಂ.ನಾಯ್ಕರ, ರವಿ ಒಡೆಯರ, ಎಂ.ಬಿ.ಶಂಕರಗೌಡ್ರ, ಎನ್‌.ಬಿ.ಮಠಪತಿ, ಚನ್ನು ನಂದಿ, ಬಸವರಾಜ ತಾವರೆ, ಎಂ.ಜಿ.ಅಳಗವಾಡಿ ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ