ಆ್ಯಪ್ನಗರ

ಯುವಕರು ದೇಶಾಭಿಮಾನ ಬೆಳೆಸಿಕೊಳ್ಳಲು ಸಲಹೆ

ಲಕ್ಷ್ಮೇಶ್ವರ : ಭಾರತ ಇಂದು ಜಗತ್ತಿನಲ್ಲಿ ತನ್ನ ಶ್ರೇಷ್ಠತೆ ಹೆಚ್ಚಿಸಿಕೊಳ್ಳುತ್ತಿದ್ದು, ಯುವಕರು ಹೆಚ್ಚು ಹೆಚ್ಚು ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ ಹೇಳಿದರು.

Vijaya Karnataka 18 Aug 2019, 5:00 am
ಲಕ್ಷ್ಮೇಶ್ವರ : ಭಾರತ ಇಂದು ಜಗತ್ತಿನಲ್ಲಿ ತನ್ನ ಶ್ರೇಷ್ಠತೆ ಹೆಚ್ಚಿಸಿಕೊಳ್ಳುತ್ತಿದ್ದು, ಯುವಕರು ಹೆಚ್ಚು ಹೆಚ್ಚು ದೇಶದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ ಹೇಳಿದರು.
Vijaya Karnataka Web GDG-17LXR02
ಲಕ್ಷ್ಮೇಶ್ವರದ ಪುರಸಭೆ ಆವರಣದಲ್ಲಿ ನಡೆದ ಸ್ವಾತಂತ್ರೋತ್ಸವ ದಿನಾಚಣೆಯ ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಪುರಸಭೆ ಆವರಣದಲ್ಲಿ ನಡೆದ ಸ್ವಾತ್ರಂತೋತ್ಸವ ಸಮಾರಂಭದಲ್ಲಿ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶವು ಸ್ವತಂತ್ರಗೊಳ್ಳಲು ಹಿರಿಯರು ಮಾಡಿದ ತ್ಯಾಗ, ಬಲಿದಾನಗಳನ್ನು ಇಂದು ಎಲ್ಲರೂ ಸ್ಮರಿಸಬೇಕಾಗಿದೆ. ದೇಶದ ಅಭಿವೃದ್ದಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಇದು ಎಲ್ಲ ಭಾರತೀಯರಿಗೂ ಮಹತ್ವವಾದ ದಿನವಾಗಿದ್ದು ಈ ದೇಶದ ಸ್ವಾತಂತ್ರ್ಯೋತ್ಸವವನ್ನು ಒಂದು ಹಬ್ಬದಂತೆ ಆಚರಿಸುವಂತಾಗಬೇಕಾಗಿದೆ ಎಂದರು. ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ದಿಪರ ಕಾರ್ಯಗಳು ನಡೆಯುತ್ತಿದ್ದು, ಈಗಾಗಲೇ ಪುರಸಭೆಯಿಂದ ಸುಮಾರು 800 ಕ್ಕೂ ಅಧಿಕ ನಿವೇಶನ ನೀಡಲಾಗಿದೆ. ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯವನ್ನು ಚುರುಕುಗೊಳಿಸಲಾಗಿದ್ದು, ತಾಲೂಕು, ಜಿಲ್ಲಾಡಳಿತ ಮತ್ತು ಸರಕಾರದ ನಿರ್ದೇಶನದಲ್ಲಿ ಕಾರ್ಯ ನಡೆಯುತ್ತಿದೆ. ಶೀಘ್ರ ಹಾನಿಗೊಳಗಾದ ಮನೆಗಳಿಗೆ ಪರಿಹಾರ ದೊರಕಿಸಲಾಗುವುದು ಎಂದ ಅವರು, ಉತ್ತಮ ಕಾರ್ಯಗಳಿಗೆ ಜನರು ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ಆರ್‌.ಪಾಟೀಲ, ಪುರಸಭೆ ನೂತನ ಸರ್ವ ಸದಸ್ಯರು, ಸಿಬ್ಬಂದಿಗಳಾದ ಆನಂದ ಬದಿ, ಎಂ.ಎಸ್‌.ಬೆಂತೂರ, ಮಂಜುನಾಥ ಮುದಗಲ್‌, ಪದವಿ ಕಾಲೇಜಿನ ಪ್ರಾಚಾರ್ಯ ಎಚ್‌.ಎನ್‌.ಕೆರೂರ ಪ.ಪೂ.ಮಹಾವಿದ್ಯಾಲಯದ ಪ್ರಾಚಾರ್ಯ ಎಸ್‌.ಎನ್‌.ಪಾಟೀಲ, ಉಮಾವಿದ್ಯಾಲಯದ ಮುಖ್ಯೋಪಾಧ್ಯಾಯ ಎಸ್‌.ಎಚ್‌.ಪೂಜಾರ, ಪೌರಕಾರ್ಮಿಕ ಸಂಘದ ಅಧ್ಯಕ್ಷ ಬಸವಣ್ಣೆಪ್ಪ ನಂದೆಣ್ಣವರ, ಕಾಲೇಜಿನ ಎನ್‌ಸಿಸಿ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ