ಆ್ಯಪ್ನಗರ

ಗದಗ: ಅಂಗನವಾಡಿ ಚಾವಣಿ ಕುಸಿದು 10 ಮಕ್ಕಳಿಗೆ ಗಂಭೀರ ಗಾಯ

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಳೆಯ ಕೊಠಡಿಯನ್ನು ದುರಸ್ತಿಗೊಳಿಸಿ ಅಂತ ಹಲವಾರು ಬಾರಿ ಮನವಿ ನೀಡಿದ್ರೂ ಪ್ರಯೋಜನವಾಗಿಲ್ಲ.

Vijaya Karnataka Web 21 Feb 2019, 7:50 pm
ಗದಗ: ಅಂಗನವಾಡಿ ಚಾವಣಿ ಕುಸಿದು 5 ಮಕ್ಕಳಿಗೆ ಗಂಭೀರ ಗಾಯ‌ಗಳಾಗಿ, 10 ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ನಡೆದಿದೆ.
Vijaya Karnataka Web ಚಾವಣಿ
ಚಾವಣಿ


ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಪ್ರತಿದಿನ 30 ಕ್ಕೂ ಅಧಿಕ ಮಕ್ಕಳು ಶಿಕ್ಷಣ ಕಲಿಯುತ್ತಿದ್ದಾರೆ. ಬುಧವಾರ ಚಾವಣಿ ಕುಸಿತದಿಂದ 5 ಮಕ್ಕಳ ತಲೆ, ಭುಜಕ್ಕೆ ಗಂಭೀರ ಗಾಯಗಳಾಗಿವೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಳೆಯ ಕೊಠಡಿಯನ್ನು ದುರಸ್ತಿಗೊಳಿಸಿ ಅಂತ ಹಲವಾರು ಬಾರಿ ಮನವಿ ನೀಡಿದ್ರೂ ಪ್ರಯೋಜನವಾಗಿಲ್ಲ.

ಇದರಿಂದ ರೋಸಿಹೊದ ಸ್ಥಳೀಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಬಂದ ಅಧಿಕಾರಿಯನ್ನು ತರಾಟೆ ತೆಗೆದುಕೊಂಡರು.

ಶಿಥಿಲವಾದ ಕೊಠಡಿಗಳನ್ನು ದುರಸ್ತಿ ಮಾಡದೇ ಹೋದ್ರೆ ಉಗ್ರ ಹೋರಾಟ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಗಾಯಾಳು ಮಕ್ಕಳನ್ನು ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ