ಆ್ಯಪ್ನಗರ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಗದಗ: ನಾನಾ ಬೇಡಿಕೆ ಈಡೇರಿಸಲು ಆಗ್ರಹಿಸಿ ಬುಧವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬೃಹತ್‌ ಪ್ರತಿಭಟನೆ ನಡೆಸಿದರು.

Vijaya Karnataka 4 Jul 2019, 5:00 am
ಗದಗ: ನಾನಾ ಬೇಡಿಕೆ ಈಡೇರಿಸಲು ಆಗ್ರಹಿಸಿ ಬುಧವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬೃಹತ್‌ ಪ್ರತಿಭಟನೆ ನಡೆಸಿದರು.
Vijaya Karnataka Web GDG-3RUDRAGOUD9


ನಂತರ ಜಿಲ್ಲಾಧಿಕಾರಿ ಮೂಲಕ ಸಿಎಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ನಾನಾ ಭಾಗದಿಂದ ಆಗಮಿಸಿದ್ದ ಆಶಾ ಕಾರ್ಯಕರ್ತೆಯರು ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಗೌರವಧನ 12 ಸಾವಿರ ನಿಗದಿ ಮಾಡಿ, ಆಶಾ ಸಾಫ್ಟ ಅಥವಾ ಆರ್‌ಸಿಪಿಎಚ್‌ ಪೋರ್ಟ್‌ಲ್‌ಗೆ ಆಶಾ ಪೋತ್ಸಾಹಧನದ ಜೋಡಣೆ ರದ್ದುಪಡಿಸಿ, ಬಾಕಿ ಉಳಿಸಿಕೊಂಡಿರುವ ಗೌರವಧನ ಹಾಗೂ ಪ್ರೋತ್ಸಾಹಧನ ಕೂಡಲೇ ನೀಡಬೇಕು ಎಂದು ಘೋರ್ಷಣೆ ಕೂಗಿದರು.

ರಾಜ್ಯ ಸರಕಾರದ ನೂತನ ವೇತನ ಪಾವತಿ ವಿಧಾನದಂತೆ ಖಜಾನೆ-2 ರಿಂದ ಮಾಸಿಕ 3500 ರೂ.ಗೌರವಧನ ಹಲವಾರು ತಿಂಗಳು ವಿಳಂಬ ಮಾಡಿದ್ದಾರೆ. ಈಗಲೂ ಸಹ ಕೆಲವೆಡೆ 4-5 ತಿಂಗಳು ಇಂದಿಗೂ ಬಾಕಿ ಇದೆ. 3-4 ವರ್ಷದಿಂದ ಹೊಸ ರೀತಿಯ ವೇತನ ವಿಧಾನ ಪದೇ ಬದಲಾವಣೆ ಮಾಡಲಾಗುತ್ತಿದೆ. ಬಡ ಆಶಾ ಕಾರ್ಯಕರ್ತೆಯರ ಮೇಲೆ ಈ ರೀತಿಯ ಪ್ರಯೋಗ ಸರಿಯಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿ ಮೂಲಕ ಆಗ್ರಹಿಸಿದರು.

ಪ್ರೇಮಾ ಪಾಟೀಲ, ಶೋಭಾ ನರಗುಂದ, ಲಲಿತಾ ಮಾಯಣ್ಣವರ, ಬಸವಣ್ಣೆಮ್ಮ ಓಲೆಕಾರ, ಮಂಜುಳಾ ಕಾಳಗಿ, ಅನ್ನಪೂರ್ಣ ಕಾಟ್ವಾ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ