ಆ್ಯಪ್ನಗರ

ಮತದಾನ ಹೆಚ್ಚಿಸಲು ಜಾಗೃತಿ ಜ್ಯೋತಿ: ಪ್ರಾಣೇಶರಾವ

ರೋಣ : ಮತದಾರರಿಗೆ ಮತದಾನದ ಪ್ರಾಶಸ್ತ್ಯ ತಿಳಿಸಿಕೊಡಲು, ಶೇಖಡಾವಾರು ಮತದಾನ ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಮತದಾನದ ಜಾಗೃತಿ ಜ್ಯೋತಿ ಕಾರ್ಯಕ್ರಮ ನಡೆಸಿದ್ದೇವೆ ಎಂದು ತಾಲೂಕು ಚುನಾವಣಾಧಿಕಾರಿ ಪ್ರಾಣೇಶರಾವ ಹೇಳಿದರು .

Vijaya Karnataka 17 Apr 2019, 5:00 am
ರೋಣ : ಮತದಾರರಿಗೆ ಮತದಾನದ ಪ್ರಾಶಸ್ತ್ಯ ತಿಳಿಸಿಕೊಡಲು, ಶೇಖಡಾವಾರು ಮತದಾನ ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಮತದಾನದ ಜಾಗೃತಿ ಜ್ಯೋತಿ ಕಾರ್ಯಕ್ರಮ ನಡೆಸಿದ್ದೇವೆ ಎಂದು ತಾಲೂಕು ಚುನಾವಣಾಧಿಕಾರಿ ಪ್ರಾಣೇಶರಾವ ಹೇಳಿದರು .
Vijaya Karnataka Web GDG-16 RON 5
ರೋಣ ತಹಸೀಲ್ದಾರ ಕಚೇರಿ ಆವರಣದಲ್ಲಿ ಮತದಾನ ಜಾಗೃತಿ ಜ್ಯೋತಿಗೆ ಮಂಗಳವಾರ ಚಾಲನೆ ನೀಡಲಾಯಿತು.


ಪಟ್ಟಣದ ತಹಸೀಲ್ದಾರ ಕಚೇರಿ ಆವರಣದಲ್ಲಿ ಮತದಾನ ಜಾಗೃತಿ ಜ್ಯೋತಿ ಹಾಗೂ ಬೈಕ್‌ ರಾರ‍ಯಲಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು

ಮತದಾನದಲ್ಲಿ ಪಾಲ್ಗೊಳ್ಳುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಎಲ್ಲ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕು. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸರ್ವರೂ ಕೈಜೋಡಿಸುವ ಮೂಲಕ ಶೇಖಡಾವಾರು ಮತದಾನ ಹೆಚ್ಚಿಸಬೇಕು. ಮುಕ್ತ, ನ್ಯಾಯ ಸಮ್ಮತ ಶಾಂತಿಯುತ ಚುನಾವಣೆಯ ಘನತೆ ಎತ್ತಿ ಹಿಡಿಯಬೇಕು. ಪ್ರತಿಯೊಬ್ಬರೂ ಚುನಾವಣೆಯಲ್ಲಿ ನಿರ್ಭೀತರಾಗಿ,ನೈತಿಕವಾಗಿ ಮತ ಚಲಾಯಿಸಬೇಕು ಎಂದರು

ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಮತದಾನ ಮಾಡುವವರ ಸಂಖ್ಯೆ ಇಂದಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಸಮಾಜದ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ತಪ್ಪದೇ ಮತದಾನ ಮಾಡಿ. ನೈತಿಕತೆಯಿಂದ ಪ್ರಾಮಾಣಿಕವಾಗಿ ಬದ್ಧತೆಯಿಂದ ಮತದಾನ ಮಾಡಬೇಕು ಎಂದರು

ತಹಸೀಲದಾರ ಶರಣಮ್ಮ ಕಾರಿ ಮಾತನಾಡಿ, 1950 ಉಚಿತ ಸಹಾಯವಾಣಿಗೆ ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಗುರುತಿನ ಚೀಟಿ ಮಾಹಿತಿ ಪಡೆಯಬಹುದು. ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಸಿವಿಜಲ್‌ ಎಂಬ ಚುನಾವಣಾ ಆ್ಯಪ್‌ ಜಾರಿಗೆ ತಂದಿದ್ದು, ಸಾರ್ವಜನಿಕರು ಡೌನ್‌ಲೋಡ್‌ ಮಾಡಿಕೊಂಡು ಚುನವಣೆಯ ನೀತಿಸಂಹಿತೆ ಉಲ್ಲಂಘನೆ ಕಂಡು ಬಂದರೆ ಅದರ ಫೋಟೋ ತೆಗೆದು ಆ್ಯಪ್‌ನಲ್ಲಿ ಹಾಕಿದರೆ ತಕ್ಷ ಣ ಆ ಬಗ್ಗೆ ಕ್ರಮವಹಿಸಲಾಗುವುದು ಎಂದರು

ಈಗಾಗಲೇ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ಬೆಂಚು,ವ್ಹೀಲ್‌ ಚೇರ್‌, ವಿದ್ಯುತ್‌ ಸಂಪರ್ಕ ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು

ಈ ಸಮಯದಲ್ಲಿ ಸ್ವೀಪ್‌ ಸಮೀತಿ ಅಧ್ಯಕ್ಷ ಸಂತೋಷ ಪಾಟೀಲ, ಬಸವರಾಜ ಅಂಗಡಿ, ಶಿವಪುತ್ರಪ್ಪ ದೊಡ್ಡಮನಿ, ಬಿ.ಎಸ್‌.ಹಿರೇಮಠ, ಜಿ.ಎಂ.ಬೂದಿಹಾಳ, ಪರಶುರಾಮ ಶೇರಖಾನೆ, ಜೆ.ಟಿ.ಕೊಪ್ಪದ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ