ಆ್ಯಪ್ನಗರ

ಮಹದಾಯಿಗಾಗಿ 16ಕ್ಕೆ ಬೆಂಗಳೂರು ಚಲೋ

ನರಗುಂದ : ಮಹದಾಯಿ ನ್ಯಾಯಾಧೀಕರಣ ತೀರ್ಪು ಹೊರಬಿದ್ದು ವರ್ಷ ಕಳೆದರೂ ಕೇಂದ್ರ ಸರಕಾರ ಗೆಜೆಟ್‌ ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿಗೆಜೆಟ್‌ ನೋಟಿಫಿಕೇಶನ್‌ ಹೊರಡಿಸುವಂತೆ ಕೇಂದ್ರ ಸರಕಾರ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಅ.16ರಂದು ಬೆಂಗಳೂರಿಗೆ ಹೋಗಲು ರೈತ ಸೇನಾ ಕರ್ನಾಟಕ ನಿರ್ಧರಿಸಿದೆ.

Vijaya Karnataka 12 Oct 2019, 5:00 am
ನರಗುಂದ : ಮಹದಾಯಿ ನ್ಯಾಯಾಧೀಕರಣ ತೀರ್ಪು ಹೊರಬಿದ್ದು ವರ್ಷ ಕಳೆದರೂ ಕೇಂದ್ರ ಸರಕಾರ ಗೆಜೆಟ್‌ ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿಗೆಜೆಟ್‌ ನೋಟಿಫಿಕೇಶನ್‌ ಹೊರಡಿಸುವಂತೆ ಕೇಂದ್ರ ಸರಕಾರ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಅ.16ರಂದು ಬೆಂಗಳೂರಿಗೆ ಹೋಗಲು ರೈತ ಸೇನಾ ಕರ್ನಾಟಕ ನಿರ್ಧರಿಸಿದೆ.
Vijaya Karnataka Web bangalore chalo at 16 for mahadyi
ಮಹದಾಯಿಗಾಗಿ 16ಕ್ಕೆ ಬೆಂಗಳೂರು ಚಲೋ


ಇಲ್ಲಿನ ಎಪಿಎಂಸಿಯ ಎ.ಪಿ.ಪಾಟೀಲ ಗೋದಾಮಿನಲ್ಲಿಗುರುವಾರ ನಡೆದ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತ ಹೋರಾಟಗಾರರು, ರೈತ ಸೇನಾ ಕರ್ನಾಟಕ ಮುಖಂಡರ ಸಭೆಯಲ್ಲಿಅ.16ರಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಬೆಂಗಳೂರು ಚಲೋ ಹಮ್ಮಿಕೊಂಡು ರಾಜ್ಯಪಾಲರ ಮಧ್ಯಸ್ಥಿಕೆಗೆ ಒತ್ತಾಯಿಸಲು ನಿರ್ಧರಿಸಲಾಗಿದೆ.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ, ''ಈ ಹಿಂದೆ ನಿರ್ಧರಿಸಿದಂತೆ ರಾಜ್ಯಪಾಲರ ಭೇಟಿಗೆ ಮನವಿ ಮಾಡಿಕೊಂಡರೂ ಕಾಲಾವಕಾಶ ಸಿಕ್ಕಿರಲಿಲ್ಲ. ಪ್ರವಾಹ ಬಂದ ಹಿನ್ನೆಲೆಯಲ್ಲಿರಾಜ್ಯಪಾಲರ ಭೇಟಿಯನ್ನು ಮುಂದೂಡಲಾಗಿತ್ತು. ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ಯೋಜನೆ ಜಾರಿಗೆ ಮುಂದಾಗುತ್ತಿಲ್ಲ. ಅ.16ರಂದು ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿಮಧ್ಯಾನ್ನ 12 ಗಂಟೆಯೊಳಗೆ ನೂರಾರು ರೈತರು ಜಮಾಯಿಸಿ ಅಲ್ಲಿಂದ ಪಾದಯಾತ್ರೆ ಮೂಲಕ ರೈಲ್ವೆ ಸ್ಟೇಶನ್‌ ವರೆಗೆ ಸಾಗಿ ಬೆಂಗಳೂರಿಗೆ ತೆರಳಿ ರಾಜ್ಯಪಾಲರ ಮಧ್ಯಸ್ಥಿಕೆಗೆ ಒತ್ತಾಯಿಸಲಾಗುವುದು''ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ