ಆ್ಯಪ್ನಗರ

ಬಾರತ್‌ ಬಂದ್‌: ಇಂದು ಶಾಲೆ, ಕಾಲೇಜ್‌ಗೆ ರಜೆ

ಗದಗ :ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿ ಸೆ.10 ರಂದು ದೇಶಾದ್ಯಂತ ಕರೆ ನೀಡಿದ ಭಾರತ ಬಂದ್‌ನ್ನು ಜಿಲ್ಲೆಯ ಕಾಂಗ್ರೆಸ್‌ ಹಾಗೂ ವಿವಿಧ ಸಂಘಟನೆಗಳು ಬೆಂಬಲಿಸಿವೆ. ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆ ವರಿಗೆ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ.

Vijaya Karnataka 10 Sep 2018, 5:00 am
ಗದಗ :ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿ ಸೆ.10 ರಂದು ದೇಶಾದ್ಯಂತ ಕರೆ ನೀಡಿದ ಭಾರತ ಬಂದ್‌ನ್ನು ಜಿಲ್ಲೆಯ ಕಾಂಗ್ರೆಸ್‌ ಹಾಗೂ ವಿವಿಧ ಸಂಘಟನೆಗಳು ಬೆಂಬಲಿಸಿವೆ. ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆ ವರಿಗೆ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ.
Vijaya Karnataka Web barat bandh today leave for school college
ಬಾರತ್‌ ಬಂದ್‌: ಇಂದು ಶಾಲೆ, ಕಾಲೇಜ್‌ಗೆ ರಜೆ


ಆರು ಗಂಟೆ ಬಂದ್‌ ಆಚರಣೆ ನಡೆಸುವ ಬಗ್ಗೆ ಈಗಾಗಲೇ ಕೆಪಿಸಿಸಿ ಉಪಾಧ್ಯಕ್ಷ ಡಿ.ಆರ್‌. ಪಾಟೀಲ ಘೋಷಿಸಿದ್ದಾರೆ. ಇದರೊಂದಿಗೆ ಭಾರತ ಬಂದ್‌ಗೆ ಜೆಡಿಎಸ್‌ ಸಹ ಬೆಂಬಲಿಸಿದ್ದರಿಂದ ಬಂದ್‌ನಲ್ಲಿ ಪಕ್ಷ ದ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ.

ಶಾಲೆ, ಕಾಲೇಜಿಗೆ ರಜೆ: ಭಾರತ ಬಂದ್‌ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ವಿವಿಧ ಸಂಘಟನೆಗಳ ಬೆಂಬಲ: ಕಾಂಗ್ರೆಸ್‌ ಕರೆ ನೀಡಿರುವ ಭಾರತ ಬಂದ್‌ಗೆ ಲಾರಿ ಮಾಲೀಕರ, ಚಾಲಕರ ಸಂಘ, ಯಂಗ್‌ ಇಂಡಿಯಾ ಪರಿವಾರದ ಆಟೊ ಚಾಲಕ-ಮಾಲೀಕರ ಸಂಘ, ಬೀದಿ ಬದಿ ವ್ಯಾಪಾರಸ್ಥರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಯಂಗ್‌ ಇಂಡಿಯಾ ಆಟೊ ಚಾಲಕ, ಮಾಲೀಕರ ಸಂಘದಿಂದ ಗದಗ- ಬೆಟಗೇರಿ ಅವಳಿ ನಗರದಲ್ಲಿ ಆಟೊ ಚಾಲಕರು ತಮ್ಮ ಆಟೊ ಸಂಚಾರ ಸ್ಥಗಿತಗೊಳಿಸಲಿದ್ದಾರೆ. ಕೇಂದ್ರ ಸರಕಾರದ ಪೆಟ್ರೋಲ್‌, ಡಿಸೇಲ್‌ ಎಲ್‌ಪಿಜಿ ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿ ಗಗನಕ್ಕೇರಿರುವ ಬೆಲೆಗಳನ್ನು ನಿಯಂತ್ರಿಸಬೇಕೆಂದು ಒತ್ತಾಯಿಸಿದ್ದಾರೆ.

ಆಟೊ ಚಾಲಕ, ಮಾಲೀಕರ ಸಂಘವು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಬೆಳಗ್ಗೆ 9ಕ್ಕೆ ನಗರದ ತೋಂಟದಾರ್ಯ ಮಠದ ಆವರಣದಿಂದ ರಾರ‍ಯಲಿ ನಡೆಸಲು ತೀರ್ಮಾನಿಸಿದೆ ಎಂದು ಯಂಗ್‌ ಇಂಡಿಯಾ ಪರಿವಾರ ಜಲ್ಲಾಧ್ಯಕ್ಷ ವಿಜಯ್‌ ಕಲ್ಮನಿ ತಿಳಿಸಿದ್ದಾರೆ.

ಬಂದ್‌ ಹಿನ್ನೆಲೆಯಲ್ಲಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸುವುದಾಗಲಿ, ಜನಜೀವನ ವ್ಯವಸ್ಥೆಗೆ ತೊಂದರೆ ಉಂಟು ಮಾಡುವುದಾಗಲಿ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಬಂದ್‌ ಕಾನೂನು ಬಾಹಿರ. ಬಲವಂತವಾಗಿ ಯಾರೇ ಬಂದ್‌ ಮಾಡಿಸಲು ಯತ್ನಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಕ್ಕೆ ಹೆಚ್ಚುವರಿಯಾಗಿ 2 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ ಎಂದು ಎಸ್ಪಿ ಕೆ.ಸಂತೋಷ್‌ ಬಾಬು ತಿಳಿಸಿದ್ದಾರೆ.

ಡೀಸೆಲ್‌ ಬೆಲೆ ಏರಿಕೆಯಿಂದ ನಷ್ಟದಲ್ಲಿರವ ಸಂಸ್ಥೆಯ ಹಿತ ಕಾಪಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ನೌಕರರು ಬಂದ್‌ಗೆ ಬೆಂಬಲಿಸಿದ್ದರಿಂದ ಸಾರಿಗೆ ಸಂಸ್ಥೆಯ ಬಸ್‌ಗಳು ರಸ್ತೆಗಿಳಿಯುವುದು ಅನುಮಾನ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ