ಆ್ಯಪ್ನಗರ

ತುಂಗಭದ್ರ ನದಿಯಲ್ಲಿ ಭಕ್ತರ ಪುಣ್ಯಸ್ನಾನ

ಮುಂಡರಗಿ : ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಬಳಿಯ ತುಂಗಭದ್ರ ನದಿಯಲ್ಲಿ ನಾಡಿನ ನಾನಾ ಮೂಲೆಗಳಿಂದ ಆಗಮಿಸಿದ್ದ ಭಕ್ತರು ಮಂಗಳವಾರ ಸಂಕ್ರಮಣದ ಪುಣ್ಯಸ್ನಾನ ಮಾಡಿ ವೀರಭದ್ರೇಶ್ವರ ದೇವರ ದರ್ಶನ ಪಡೆದರು.

Vijaya Karnataka 16 Jan 2019, 5:00 am
ಮುಂಡರಗಿ : ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಬಳಿಯ ತುಂಗಭದ್ರ ನದಿಯಲ್ಲಿ ನಾಡಿನ ನಾನಾ ಮೂಲೆಗಳಿಂದ ಆಗಮಿಸಿದ್ದ ಭಕ್ತರು ಮಂಗಳವಾರ ಸಂಕ್ರಮಣದ ಪುಣ್ಯಸ್ನಾನ ಮಾಡಿ ವೀರಭದ್ರೇಶ್ವರ ದೇವರ ದರ್ಶನ ಪಡೆದರು.
Vijaya Karnataka Web GDG-15MDR1 SANKRANTI
ಮುಂಡರಗಿ ತಾಲೂಕಿನ ಸುಕ್ಷೇತ್ರ ಶಿಂಗಟಾಲೂರು ಬಳಿಯ ತುಂಗಭದ್ರ ನದಿಯಲ್ಲಿ ಮಂಗಳವಾರ ಭಕ್ತರು ಪುಣ್ಯಸ್ನಾನ ಮಾಡಿದರು.


ಗದಗ ಜಿಲ್ಲೆ ಸೇರಿದಂತೆ ಕೊಪ್ಪಳ, ಹಡಗಲಿ, ಬಳ್ಳಾರಿ, ಹಾವೇರಿ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಹರಪನಹಳ್ಳಿ ಇತರ ಕಡೆಯಿಂದ ಆಗಮಿಸಿದ್ದ ಭಕ್ತರು ತುಂಗಭದ್ರ ನದಿಯಲ್ಲಿ ಮಿಂದೆದ್ದು ಶಿಂಗಟಾಲೂರು ವೀರಭದ್ರೇಶ್ವರ ದರ್ಶನ ಪಡೆದು ಪುನೀತರಾದರು.

ನಂತರ ಕೊರ್ಲಹಳ್ಳಿ ಬಳಿಯ ನದಿಯಲ್ಲೂ ಪುಣ್ಯಸ್ನಾನ ಮಾಡಿ ನದಿ ತೀರದಲ್ಲಿರುವ ಮದ್ಲಗಟ್ಟೆ ಆಂಜನೇಯನ ದರ್ಶನ ಪಡೆದರು. ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ಭೋಜನ ಸವಿದರು. ತಾಲೂಕಿನ ಐತಿಹಾಸಿಕ ಡಂಬಳ ದೊಡ್ಡಬಸವೇಶ್ವರ, ಸೋಮೇಶ್ವರ, ತೋಂಟದಾರ್ಯ ದೇವಸ್ಥಾನ, ಮರಳಸಿದ್ದೇಶ್ವರ ಗುಡ್ಡ ಮತ್ತು ಕಪ್ಪತಗುಡ್ಡ, ನಂದಿವೇರಿಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಪರಸ್ಪರ ಮಕರ ಸಂಕ್ರಮಣದ ಶುಭಾಶಯ ಕೋರಿ ಹರ್ಷದಿಂದ ಮಕರ ಸಂಕ್ರಾಂತಿ ಅಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ