ಆ್ಯಪ್ನಗರ

ಬಿಜೆಪಿ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ರೋಣ :ಹಾವೇರಿ ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲುವು ಸಾಧಿಸಿದ್ದರಿಂದ ತಾಲೂಕಿನ ಹಿರೇಮಣ್ಣೂರ ಗ್ರಾಮದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Vijaya Karnataka 27 May 2019, 5:00 am
ರೋಣ :ಹಾವೇರಿ ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಗೆಲುವು ಸಾಧಿಸಿದ್ದರಿಂದ ತಾಲೂಕಿನ ಹಿರೇಮಣ್ಣೂರ ಗ್ರಾಮದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
Vijaya Karnataka Web GDG-26 RON 5
ಹಿರೇಮಣ್ಣೂರ ಗ್ರಾಮದಲ್ಲಿ ಬಿಜೆಪಿ ಕಾರ‍್ಯಕರ್ತರು ವಿಜಯೋತ್ಸವ ಆಚರಿಸಿದರು.


ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪಕ್ಷ ದ ಭಾವುಟ ಹಿಡಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಶಾಸಕ ಕಳಕಪ್ಪ ಬಂಡಿ ಅವರ ಪರ ಘೋಷಣೆ ಕೂಗಿದರು.

ಗ್ರಾಮದ ಬಸ್‌ ನಿಲ್ದಾಣದ ಆವರಣದಲ್ಲಿ ಮುಖಂಡ ಶಿವಪ್ಪ ಓಲೇಕಾರ ಮಾತನಾಡಿ, 2014ರ ಲೋಕಸಭಾ ಚುನಾವಣೆಯಲ್ಲಿದ್ದ ಮೋದಿ ಅಲೆ ಈ ಬಾರಿ ಸುನಾಮಿಯಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಭಾರಿ ಬಹುಮತ ನೀಡಿರುವುದಲ್ಲದೇ ಶಿವಕುಮಾರ ಉದಾಸಿ ಹ್ಯಾಟ್ರಿಕ್‌ ಗೆಲುವಿಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷಗಳ ಆಡಳಿತಕ್ಕೆ ಜನರ ಬೆಂಬಲ ದೊರಕಿದೆ. ದೇಶದ ಅಭಿವೃದ್ಧಿ, ರಕ್ಷ ಣೆ ಮತ್ತು ಆಡಳಿತ ನಿರ್ವಹಣೆಗೆ ಮೋದಿಯೇ ಸಮರ್ಥ ನಾಯಕ ಎಂಬುದನ್ನು ಮತದಾರರು ಒಪ್ಪಿದ್ದಾರೆ. ಈ ಕಾರಣದಿಂದಾಗಿಯೇ ಅಭೂತಪೂರ್ವ ಬೆಂಬಲ ದೊರಕಿದೆ ಎಂದರು

ಬಿಜೆಪಿ ಯುವ ಮುಖಂಡ ಸಕ್ರಪ್ಪ ಚಳಗೇರಿ ಮಾತನಾಡಿ, ಶಿವಕುಮಾರ ಉದಾಸಿ ಅವರ ಆಡಳಿತ ಜನರ ಮನ ಮುಟ್ಟಿದೆ ಎನ್ನುವುದನ್ನು ಫಲಿತಾಂಶ ಸಾಬೀತುಪಡಿಸಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಎರಡನೇಯ ಬಾರಿಗೆ ಪ್ರಧಾನ ಮಂತ್ರಿಯಾಗುವ ಮೂಲಕ ದೇಶವನ್ನು ಜಗತ್ತು ಗುರುತಿಸುವ ಕಾರ್ಯಕ್ಕೆ ಮತ್ತಷ್ಟು ಮೆರಗು ಬಂದಿದೆ ಎಂದರು

ಶಿವರಾಜ ಹುಲ್ಲೂರ, ವಿರೇಶ ಹನಸಿ, ಶರಣು ಓಲೇಕಾರ, ಸಂಗಪ್ಪ ಕಪ್ಪಲಿ, ಸಂಕಪ್ಪ ಹುಲ್ಲೂರ, ಶಂಕ್ರಪ್ಪ ಹುಲ್ಲೂರ, ಕಳಕಪ್ಪ ಆರೇರ, ಶರಣು ಹುಲ್ಲೂರ, ಬಿಜೆಪಿ ನೂರಾರು ಕಾರ‍್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ