ಆ್ಯಪ್ನಗರ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಗದಗ : ಕಾಂಗ್ರೆಸ್‌ -ಜೆಡಿಎಸ್‌ ಸಮ್ಮಿಶ್ರ ಸರಕಾರ ಪತನವಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗದಗ ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Vijaya Karnataka 24 Jul 2019, 5:00 am
ಗದಗ : ಕಾಂಗ್ರೆಸ್‌ -ಜೆಡಿಎಸ್‌ ಸಮ್ಮಿಶ್ರ ಸರಕಾರ ಪತನವಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗದಗ ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
Vijaya Karnataka Web GDG-23SALIM1B
ಗದಗ ನಗರದ ಮುಳಗುಂದ ನಾಕಾದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.


ಸರಕಾರ ಪತನದ ಸುದ್ದಿ ಖಚಿತವಾಗುತ್ತಿದ್ದಂತೆ ಮುಂಡರಗಿ, ರೋಣ, ಗಜೇಂದ್ರಗಡ, ಶಿರಹಟ್ಟಿ ಸೇರಿದಂತೆ ಜಿಲ್ಲೆಯಾದ್ಯಂತ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು, ಬಣ್ಣ ಎರಚಿ, ಪಟಾಕಿ ಸಿಟಿ, ಸಿಹಿ ಹಂಚಿ ಉಸಂಭ್ರಮಿಸಿದರು.

ಗದಗ ನಗರದ ಹುಯಿಲಗೋಳ ನಾರಾಯಣರಾವ್‌ ವೃತ್ತ, ಮುಳಗುಂದ ನಾಕಾದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡರಾದ ಎಂ.ಎಂ. ಹಿರೇಮಠ, ಸುಧೀರ ಕಾಟೀಗರ್‌, ಶಾರದಾ ಸಜ್ಜನರ, ಕಾಂತಿಲಾಲ್‌ ಬನ್ಸಾಲಿ, ಸಂಗಮೇಶ ದುಂದೂರ, ವಿನಾಯಕ ಹಬೀಬ, ಪ್ರಶಾಂತ ನಾಯ್ಕರ್‌, ಶ್ರೀಶೈಲಪ್ಪ ತಳಗೇರಿ, ಸಾಗರ ಗ್ವಾರಿ, ಗಂಗಾಧರ ಹಬೀಬ, ಕಿಶನ್‌ ಮೇರವಾಡೆ, ಅನಿಲ ಅಬ್ಬಿಗೇರಿ, ಪ್ರವೀಣ ಬೆನ್ಸಾಲಿ, ರಾಘವೇಂದ್ರ ಯಳಮತ್ತಿ, ಮಾಧು ಹಾದಿಮನಿ, ಮುಖೇಶ ಭಾಂಡಗೆ, ನಾಗರಾಜ ಖೋಡೆ, ವಿಜಯಲಕ್ಷ್ಮೇ ಮಾನ್ವಿ , ಇರ್ಷಾದ ಮಾನ್ವಿ, ರವಿ ದಂಡಿನ, ಸುರೇಶ ಮುಗದುಮ್‌, ಸಿದ್ರಾಮೇಶ ಹಿರೇಮಠ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ