ಆ್ಯಪ್ನಗರ

ಮತದಾನ ಪಟ್ಟಿ ಪರಿಷ್ಕರಣೆ ಕಾರ‍್ಯ ಬೇಗ ಮುಗಿಸಿ

ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ ಕಾರ್ಯಾಲಯ ಮತ್ತು ಪುರಸಭೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಮತದಾನ ಪಟ್ಟಿ ವಿಶೇಷ ಪರಿಷ್ಕರಣೆಯ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

Vijaya Karnataka 13 Oct 2019, 5:00 am
ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ ಕಾರ್ಯಾಲಯ ಮತ್ತು ಪುರಸಭೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಮತದಾನ ಪಟ್ಟಿ ವಿಶೇಷ ಪರಿಷ್ಕರಣೆಯ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.
Vijaya Karnataka Web 12LXR01 _25
ಲಕ್ಷ್ಮೇಶ್ವರದ ಪುರಸಭೆಯಲ್ಲಿಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಮತದಾನ ಪಟ್ಟಿ ವಿಶೇಷ ಪರಿಷ್ಕರಣೆಯ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.


ನಂತರ ಮಾತನಾಡಿದ ಅವರು ಶನಿವಾರ ಮತ್ತು ಭಾನುವಾರ ಯಾವುದೇ ರಜೆಯಿಲ್ಲದೇ ಸರಕಾರಿ ಕಾರ್ಯಾಲಯಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ಎಲ್ಲಾಸಿಬ್ಬಂದಿಗಳು ಮತದಾನ ಪಟ್ಟಿ ವಿಶೇಷ ಪರಿಷ್ಕರಣೆ ಮಾಡುತ್ತಿದ್ದು, ಅವರಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ತಹಸೀಲ್ದಾರ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಇನ್ನೂ ಹೆಚ್ಚಿನ ಕಂಪ್ಯೂಟರ್‌, ಲ್ಯಾಪ್‌-ಟಾಪ್‌ ವ್ಯವಸ್ಥೆ ಮಾಡಿ ಆದಷ್ಟು ಬೇಗ ಪರಿಷ್ಕರಣೆ ಕಾರ್ಯ ಮುಗಿಸಬೇಕು ಎಂದು ಸೂಚಿಸಿದರು.

ಮತದಾರರು ತಮ್ಮ ಆಧಾರ ಕಾರ್ಡ್‌ ಝರಾಕ್ಸ್‌ ಪ್ರತಿಯನ್ನು ಸಮೀಪದ ಅಂಗನವಾಡಿ ಕಾರ್ಯಕರ್ತರಿಗೆ, ಪುರಸಭೆ, ಗ್ರಾಮ ಪಂಚಾಯಿತಿ ಸಿಬ್ಬಂದಿ ಬಳಿ ನೀಡಬೇಕು. ಮತದಾರರ ಬೃಹತ್‌ ಪರಿಶೀಲನಾ ಆಂದೋಲನದಲ್ಲಿಪಾಲ್ಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿತಹಸೀಲ್ದಾರ ಭ್ರಮರಾಂಬಿಕಾ ಗುಬ್ಬಿಶೆಟ್ಟಿ, ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ, ಮ್ಯಾನೇಜರ್‌ ಮಂಜುಳಾ ಹೂಗಾರ, ಎನ್‌.ಎಂ.ಹಾದಿಮನಿ, ಮಂಜುನಾಥ ಮುದಗಲ್‌ ಸೇರಿದಂತೆ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ