ಆ್ಯಪ್ನಗರ

ಕಾಮಗಾರಿ ಪೂರ್ಣಗೊಳಿಸಿ ಅಪಘಾತ ತಪ್ಪಿಸಿ

ನರಗುಂದ: ಹೆದ್ದಾರಿ ಅಗಲಿಕರಣ ಮತ್ತು ಡಿವೈಡರ್‌ ನಿರ್ಮಾಣ ಕಾರ್ಯ ಅಪೂರ್ಣಗೊಂಡ ಪರಿಣಾಮ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿದಿನೇ ದಿನೆ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ ಹೆದ್ದಾರಿ ಸಂಚಾರ ಸುಗಮಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Vijaya Karnataka 17 Jan 2020, 5:00 am
ನರಗುಂದ: ಹೆದ್ದಾರಿ ಅಗಲಿಕರಣ ಮತ್ತು ಡಿವೈಡರ್‌ ನಿರ್ಮಾಣ ಕಾರ್ಯ ಅಪೂರ್ಣಗೊಂಡ ಪರಿಣಾಮ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿದಿನೇ ದಿನೆ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ ಹೆದ್ದಾರಿ ಸಂಚಾರ ಸುಗಮಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web complete the work and avoid the accident
ಕಾಮಗಾರಿ ಪೂರ್ಣಗೊಳಿಸಿ ಅಪಘಾತ ತಪ್ಪಿಸಿ


ನಗರದಲ್ಲಿಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 218ರಲ್ಲಿಕೈಗೊಂಡ ಕಾಮಗಾರಿ ನಾಲ್ಕು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಅಲ್ಲಲ್ಲಿಕಾಮಗಾರಿ ಅಪೂರ್ಣಗೊಳಿಸಿ ಕೈಬಿಟ್ಟಿದ್ದು, ರಸ್ತೆ ಅಪಘಾತಕ್ಕೆ ಕಾರಣವಾಗುತ್ತಿವೆ. ಅವೈಜ್ಞಾನಿಕ ಡಿವೈಡರ್‌ಗಳು ವಾಹನ ಸವಾರರ ಪ್ರಾಣ ತೆಗೆಯುತ್ತಿವೆ. ಕೂಡಲೇ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕರವೇ ಮನವಿಯಲ್ಲಿಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ತಹಸೀಲ್ದಾರ ಮಹೇಂದ್ರ ಅವರು, ಹೆದ್ದಾರಿ ಕಾಮಗಾರಿ ಅಪೂರ್ಣಗೊಂಡಿದ್ದು, ಅಪಘಾತಗಳು ಸಂಭವಿಸುತ್ತಿವೆ. ಈ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಗಮನ ಹರಿಸುವುದಾಗಿ ಭರವಸೆ ನೀಡಿದರು.

ಕನ್ನಡ ಪರ ಸಂಘಟನೆಯ ಚನ್ನು ನಂದಿ, ಗೌರವಾದ್ಯಕ್ಷ ರಾಘವೇಂದ್ರ ಗುಜಮಾಗಡಿ ಮಾತನಾಡಿದರು.ಈ ಸಂದರ್ಭದಲ್ಲಿಮುಖಂಡ ಶಿವಾನಂದ ಮುತವಾಡ, ಕರವೆ ಅಧ್ಯಕ್ಷ ನಬಿಸಾಬ ಕಿಲ್ಲೇದಾರ, ಈಶ್ವರಯ್ಯ ಹಿರೇಮಠ, ಎಂ.ಎ.ಕರಮನಿ, ಎಸ್‌.ಎಂ.ಮುಲ್ಲಾನವರ, ಸಿಕಂದರ ಮಾಲದಾರ, ಇಸ್ಮಾಯಿಲ್‌ ಹಜರತನವರ, ಸಿ.ಎಚ್‌.ಹೊಸರಣ್ಣವರ, ಎಂ.ಬಿ.ಅಸೇದಾರ, ಪ್ರವೀಣ ಅಂಬಣ್ಣವರ, ಮಹ್ಮದರಫೀಕ್‌ ಬಕಾರಿ, ಸುಬಾನಿ ಮುಲ್ಲಾನವರ, ಇಮಾಮಹುಸೆನ ತಾಲೇದ, ಇಮಾಮಸಾಬ ಹದ್ಲಿ, ಜಯಶ್ರೀ ಚಲಲವಾದಿ, ಅಲ್ಲಾಭಕ್ಷ ಮುಲ್ಲಾ, ಬಸುರಾಜ ರಂಗನ್ನವರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ